<p><strong>ಇಂಚಲ (ಬೈಲಹೊಂಗಲ)</strong>: ‘ಸಮಾಜದ ಒಳಿತಿಗೆ ದುಡಿದ ಗುರು ಸಿದ್ದಾರೂಢರ ಹೆಸರನ್ನು ಹುಬ್ಬಳ್ಳಿಯ ವಿಮಾನನಿಲ್ದಾಣಕ್ಕೆ ನಾಮಕರಣ ಮಾಡಬೇಕು’ ಎಂದು ಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಶಿವಾನಂದ ಭಾರತಿ ಸ್ವಾಮೀಜಿ ಮನವಿ ಮಾಡಿದರು.</p>.<p>ಶ್ರೀಮಠಕ್ಕೆ ಸೋಮವಾರ ಭೇಟಿ ನೀಡಿದ ಕೇಂದ್ರ ಆಯುಷ್ ಸಚಿವ ಶ್ರೀಪಾದ ಯಸೋ ನಾಯಕ ಹಾಗೂ ರಾಜ್ಯ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಮಾತನಾಡಿದ ಶ್ರೀಗಳು ಈ ವಿಷಯ ಪ್ರಸ್ತಾಪಿಸಿದರು.</p>.<p>‘ಸಮಾಜದ ಸೃಷ್ಟಿಕರ್ತ ಭಗವಂತನ ಸಮಾನವಾಗಿ ಹೆಸರು ಮಾಡಿದ ಶ್ರೇಯಸ್ಸು ಸಿದ್ದಾರೂಢರಿಗೆ ಸಲ್ಲುತ್ತದೆ. ದೇಶ, ಸಮಾಜಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ಹೆಸರು ಮುಂದಿನ ಜನಾಂಗದವರಿಗೆ ಗೊತ್ತಾಗುವಂತಾಗಲು ಪುಸ್ತಕಗಳನ್ನು ಪ್ರಕಟಿಸಬೇಕು.</p>.<p>ಅಣೆಕಟ್ಟು ಹಾಗೂ ಪ್ರಮುಖ ವೃತ್ತಗಳಿಗೆ ಹೆಸರು ಇಡಬೇಕು. ಧರ್ಮಕ್ಕಾಗಿ ದುಡಿದವರ ಜೀವನ ಸಾಧನೆಯನ್ನು ದಾಖಲಿಸಬೇಕು. ಅವರನ್ನು ಸಮಾಜ ನೆನಪಿಸಿಕೊಳ್ಳುವಂತೆ ಮಾಡಬೇಕು. ಇದಕ್ಕಾಗಿ ಇದೇ 4ರಂದು ಮಠಾಧಿಪತಿಗಳು ಮತ್ತು ಭಕ್ತರಿಂದ ರಾಜ್ಯ, ಕೇಂದ್ರ ಸರ್ಕಾರಗಳ ಗಮನಸೆಳೆಯಲು ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಶ್ರೀಗಳ ಮನವಿಗೆ ಸ್ಪಂದಿಸಿದ ಸಚಿವರು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಂಸದ ಸುರೇಶ ಅಂಗಡಿ, ಶಾಸಕ ಡಾ.ವಿಶ್ವನಾಥ ಪಾಟೀಲ, ಪುರಸಭೆ ಸದಸ್ಯ ರಾಜು ಜನ್ಮಟ್ಟಿ, ಮುಖಂಡರಾದ ಅಮರಸಿಂಹ ಪಾಟೀಲ, ಶಿವಾನಂದ ಕೌಜಲಗಿ, ಮಹಾಂತೇಶ ಕೌಜಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಚಲ (ಬೈಲಹೊಂಗಲ)</strong>: ‘ಸಮಾಜದ ಒಳಿತಿಗೆ ದುಡಿದ ಗುರು ಸಿದ್ದಾರೂಢರ ಹೆಸರನ್ನು ಹುಬ್ಬಳ್ಳಿಯ ವಿಮಾನನಿಲ್ದಾಣಕ್ಕೆ ನಾಮಕರಣ ಮಾಡಬೇಕು’ ಎಂದು ಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಶಿವಾನಂದ ಭಾರತಿ ಸ್ವಾಮೀಜಿ ಮನವಿ ಮಾಡಿದರು.</p>.<p>ಶ್ರೀಮಠಕ್ಕೆ ಸೋಮವಾರ ಭೇಟಿ ನೀಡಿದ ಕೇಂದ್ರ ಆಯುಷ್ ಸಚಿವ ಶ್ರೀಪಾದ ಯಸೋ ನಾಯಕ ಹಾಗೂ ರಾಜ್ಯ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಮಾತನಾಡಿದ ಶ್ರೀಗಳು ಈ ವಿಷಯ ಪ್ರಸ್ತಾಪಿಸಿದರು.</p>.<p>‘ಸಮಾಜದ ಸೃಷ್ಟಿಕರ್ತ ಭಗವಂತನ ಸಮಾನವಾಗಿ ಹೆಸರು ಮಾಡಿದ ಶ್ರೇಯಸ್ಸು ಸಿದ್ದಾರೂಢರಿಗೆ ಸಲ್ಲುತ್ತದೆ. ದೇಶ, ಸಮಾಜಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ಹೆಸರು ಮುಂದಿನ ಜನಾಂಗದವರಿಗೆ ಗೊತ್ತಾಗುವಂತಾಗಲು ಪುಸ್ತಕಗಳನ್ನು ಪ್ರಕಟಿಸಬೇಕು.</p>.<p>ಅಣೆಕಟ್ಟು ಹಾಗೂ ಪ್ರಮುಖ ವೃತ್ತಗಳಿಗೆ ಹೆಸರು ಇಡಬೇಕು. ಧರ್ಮಕ್ಕಾಗಿ ದುಡಿದವರ ಜೀವನ ಸಾಧನೆಯನ್ನು ದಾಖಲಿಸಬೇಕು. ಅವರನ್ನು ಸಮಾಜ ನೆನಪಿಸಿಕೊಳ್ಳುವಂತೆ ಮಾಡಬೇಕು. ಇದಕ್ಕಾಗಿ ಇದೇ 4ರಂದು ಮಠಾಧಿಪತಿಗಳು ಮತ್ತು ಭಕ್ತರಿಂದ ರಾಜ್ಯ, ಕೇಂದ್ರ ಸರ್ಕಾರಗಳ ಗಮನಸೆಳೆಯಲು ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಶ್ರೀಗಳ ಮನವಿಗೆ ಸ್ಪಂದಿಸಿದ ಸಚಿವರು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಂಸದ ಸುರೇಶ ಅಂಗಡಿ, ಶಾಸಕ ಡಾ.ವಿಶ್ವನಾಥ ಪಾಟೀಲ, ಪುರಸಭೆ ಸದಸ್ಯ ರಾಜು ಜನ್ಮಟ್ಟಿ, ಮುಖಂಡರಾದ ಅಮರಸಿಂಹ ಪಾಟೀಲ, ಶಿವಾನಂದ ಕೌಜಲಗಿ, ಮಹಾಂತೇಶ ಕೌಜಲಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>