ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಸೇರಿದಂತೆ ಪಕ್ಷದ ಹಲವು ನಾಯಕರು ಮೆರವಣಿಗೆ ನೇತೃತ್ವ ವಹಿಸಿದ್ದಾರೆ. ಸಿಪಿಎಂ ಮತ್ತು ಪಕ್ಷದ ಸಹವರ್ತಿ ಸಂಘಟನೆಗಳ ಸಹಸ್ರಾರು ಕಾರ್ಯಕರ್ತರು ಕೆಂಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದಾರೆ. ಪಕ್ಷದ ಕಾರ್ಯಕರ್ತರ ಬ್ಯಾಂಡ್ ತಂಡಗಳು ಮೆರವಣಿಗೆಗೆ ರಂಗು ತುಂಬಿವೆ.