ಜಿಲ್ಲೆಯ ಖಾಸಗಿ ಆಸ್ಪತ್ರೆಯ ಜೊತೆಗೆ ನರ್ಸಿಂಗ್ ಹೋಂಗಳು, ಪ್ರಯೋಗಾಲಯಗಳು ಸೋಮವಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಪರಿಷತ್ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲು ಮುಂದಾಗಿರುವ ಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರ ಬದಲಿಗೆ ವೈದ್ಯಕೀಯ ಪರಿಷತ್ ಅನ್ನೇ ಬಲಪಡಿಸಬೇಕು ಎಂಬುದು ವೈದ್ಯರ ವಾದವಾಗಿದೆ ಎಂದು ಅವರು ತಿಳಿಸಿದ್ದಾರೆ.