<p><strong>ಅರಕಲಗೂಡು:</strong> ಗಂಗನಾಳು ಏತನೀರಾವರಿ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಜ. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ತಿಳಿಸಿದರು.</p>.<p>ಭಾನುವಾರ ಏತ ನೀರಾವರಿ ಯೋಜನೆಯ ಪ್ರಾಯೋಗಿಕ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮೂಲಕ ಈ ಭಾಗದ ರೈತರ ಬಹುದಿನಗಳ ಕನಸು ನನಸಾಗುತ್ತಿದೆ’ ಎಂದು ಹೇಳಿದರು.</p>.<p>‘₹ 34 ಕೋಟಿ ವೆಚ್ಚದ ಈ ಯೋಜನೆ ಪೂರ್ಣಗೊಂಡರೆ ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿ ವ್ಯಾಪ್ತಿಯ 44 ಗ್ರಾಮಗಳ ವ್ಯಾಪ್ತಿಯ 92 ಕೆರೆಗಳಿಗೆ ನೀರು ಹರಿಯಲಿದೆ’ ಎಂದು ತಿಳಿಸಿದರು.</p>.<p>ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. 20 ಗ್ರಾಮಗಳ 21 ಕೆರೆಗಳಿಗೆ ನೀರು ತುಂಬಿಸಲಾಗುವುದು. ಎರಡನೆ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಇದೂ ಮುಕ್ತಾಯವಾಗಲಿದೆ ಎಂದರು.</p>.<p>ಹೇಮಾವತಿ ನದಿಯಿಂದ ನೀರನ್ನು ಏತ್ತಿ 120 ದಿನಗಳ ಕಾಲ ಕೊಳವೆಗಳ ಮೂಲಕ ಹಾಯಿಸಿ ಕೆರೆಕಟ್ಟೆಗಳನ್ನು ತುಂಬಿಸುವ ಈ ಕಾಮಗಾರಿಗೆ ಮುಖ್ಯಮಂತ್ರಿ ಅವರು ಅಗತ್ಯ ಅನುದಾನ ನೀಡಿ, ತುರ್ತಾಗಿ ಕಾಮಗಾರಿ ಪೂರ್ಣಗೊಳ್ಳಲು ನೆರವಾಗಿದ್ದಾರೆ ಎಂದರು.</p>.<p>ಕಸಬಾ ಹೋಬಳಿಯ ಬೈಚನಹಳ್ಳಿ ಸುತ್ತಮುತ್ತಲ ಗ್ರಾಮಗಳ ಜನತೆಗೆ ಈ ಯೋಜನೆ ಜಾರಿಯಿಂದ ನೆರವಾಗಲಿದೆ. ಕೆರೆಕಟ್ಟೆಗಳಿಗೆ ನೀರು ಹರಿದು, ಅಂತರ್ಜಲದ ಮಟ್ಟ ಉತ್ತಮಗೊಳ್ಳಲಿದೆ. ಕೊಳವೆಬಾವಿಗಳು ಪುನಶ್ಚೇತನಗೊಳ್ಳಲಿವೆ. ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.</p>.<p>ಅಧಿಕಾರಿಗಳೂ ಕೂಡಾ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶೀಘ್ರವಾಗಿ ಪೂರ್ಣಗೊಳಿಸಿದ್ದಾರೆ. ಈ ಯೋಜನೆಗಾಗಿ 16 ಎಕರೆ ಭೂಮಿಯನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ ಗುಂಟೆಗೆ ₹ 62 ಸಾವಿರದಂತೆ ಮಾರುಕಟ್ಟೆ ದರ ನೀಡಲಾಗಿದೆ ಎಂದು ವಿವರಿಸಿದರು.</p>.<p>ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಕೆಲ ರೈತರಿಗೆ ತೊಂದರೆಯಾಗಿದೆ. ಇದಕ್ಕಾಗಿ ಬೇಸರಿಸಬಾರದು. ಯೋಜನೆ ಜಾರಿ ಸಂದರ್ಭದಲ್ಲಿ ಕೆಲವರಿಗೆ ತೊಂದರೆಯಾಗುವುದು ಅನಿವಾರ್ಯ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಅವರೇ ಉದ್ಘಾಟಿಸುತ್ತಿರವುದು ಸಂತಸಕರ ವಿಚಾರವಾಗಿದೆ ಎಂದರು. ಕಾವೇರಿ ನೀರಾವರಿ ನಿಗಮದ ಎಇಇ ಗಣೇಶ್, ಮುಖಂಡ ಶ್ರೀನಿವಾಸ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಕಲಗೂಡು:</strong> ಗಂಗನಾಳು ಏತನೀರಾವರಿ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಜ. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ತಿಳಿಸಿದರು.</p>.<p>ಭಾನುವಾರ ಏತ ನೀರಾವರಿ ಯೋಜನೆಯ ಪ್ರಾಯೋಗಿಕ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮೂಲಕ ಈ ಭಾಗದ ರೈತರ ಬಹುದಿನಗಳ ಕನಸು ನನಸಾಗುತ್ತಿದೆ’ ಎಂದು ಹೇಳಿದರು.</p>.<p>‘₹ 34 ಕೋಟಿ ವೆಚ್ಚದ ಈ ಯೋಜನೆ ಪೂರ್ಣಗೊಂಡರೆ ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿ ವ್ಯಾಪ್ತಿಯ 44 ಗ್ರಾಮಗಳ ವ್ಯಾಪ್ತಿಯ 92 ಕೆರೆಗಳಿಗೆ ನೀರು ಹರಿಯಲಿದೆ’ ಎಂದು ತಿಳಿಸಿದರು.</p>.<p>ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. 20 ಗ್ರಾಮಗಳ 21 ಕೆರೆಗಳಿಗೆ ನೀರು ತುಂಬಿಸಲಾಗುವುದು. ಎರಡನೆ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿಯೇ ಇದೂ ಮುಕ್ತಾಯವಾಗಲಿದೆ ಎಂದರು.</p>.<p>ಹೇಮಾವತಿ ನದಿಯಿಂದ ನೀರನ್ನು ಏತ್ತಿ 120 ದಿನಗಳ ಕಾಲ ಕೊಳವೆಗಳ ಮೂಲಕ ಹಾಯಿಸಿ ಕೆರೆಕಟ್ಟೆಗಳನ್ನು ತುಂಬಿಸುವ ಈ ಕಾಮಗಾರಿಗೆ ಮುಖ್ಯಮಂತ್ರಿ ಅವರು ಅಗತ್ಯ ಅನುದಾನ ನೀಡಿ, ತುರ್ತಾಗಿ ಕಾಮಗಾರಿ ಪೂರ್ಣಗೊಳ್ಳಲು ನೆರವಾಗಿದ್ದಾರೆ ಎಂದರು.</p>.<p>ಕಸಬಾ ಹೋಬಳಿಯ ಬೈಚನಹಳ್ಳಿ ಸುತ್ತಮುತ್ತಲ ಗ್ರಾಮಗಳ ಜನತೆಗೆ ಈ ಯೋಜನೆ ಜಾರಿಯಿಂದ ನೆರವಾಗಲಿದೆ. ಕೆರೆಕಟ್ಟೆಗಳಿಗೆ ನೀರು ಹರಿದು, ಅಂತರ್ಜಲದ ಮಟ್ಟ ಉತ್ತಮಗೊಳ್ಳಲಿದೆ. ಕೊಳವೆಬಾವಿಗಳು ಪುನಶ್ಚೇತನಗೊಳ್ಳಲಿವೆ. ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.</p>.<p>ಅಧಿಕಾರಿಗಳೂ ಕೂಡಾ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶೀಘ್ರವಾಗಿ ಪೂರ್ಣಗೊಳಿಸಿದ್ದಾರೆ. ಈ ಯೋಜನೆಗಾಗಿ 16 ಎಕರೆ ಭೂಮಿಯನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ ಗುಂಟೆಗೆ ₹ 62 ಸಾವಿರದಂತೆ ಮಾರುಕಟ್ಟೆ ದರ ನೀಡಲಾಗಿದೆ ಎಂದು ವಿವರಿಸಿದರು.</p>.<p>ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಕೆಲ ರೈತರಿಗೆ ತೊಂದರೆಯಾಗಿದೆ. ಇದಕ್ಕಾಗಿ ಬೇಸರಿಸಬಾರದು. ಯೋಜನೆ ಜಾರಿ ಸಂದರ್ಭದಲ್ಲಿ ಕೆಲವರಿಗೆ ತೊಂದರೆಯಾಗುವುದು ಅನಿವಾರ್ಯ ಎಂದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಅವರೇ ಉದ್ಘಾಟಿಸುತ್ತಿರವುದು ಸಂತಸಕರ ವಿಚಾರವಾಗಿದೆ ಎಂದರು. ಕಾವೇರಿ ನೀರಾವರಿ ನಿಗಮದ ಎಇಇ ಗಣೇಶ್, ಮುಖಂಡ ಶ್ರೀನಿವಾಸ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>