ಪ್ರಕರಣದ ಹಿನ್ನೆಲೆ:
ಪಶ್ಚಿಮ ಬಂಗಾಳದ ವಿಎಸ್ಯುಎಲ್ಗೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡದಂತೆ ಕಲ್ಲಿದ್ದಲು ಸಚಿವಾಲಯ ಮಾಡಿದ್ದ ಶಿಫಾರಸನ್ನು ಮರೆಮಾಚಿ, ಅದೇ ಸಂಸ್ಥೆಗೆ ನಿಕ್ಷೇಪ ಹಂಚಿಕೆ ಮಾಡುವಂತೆ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ.ಗುಪ್ತಾ ನೇತೃತ್ವದ ಪರಿಶೀಲನಾ ಸಮಿತಿ ಶಿಫಾರಸು ಮಾಡಿತ್ತು. ಹೀಗೆ ಅಕ್ರಮವಾಗಿ ನಿಕ್ಷೇಪ ಹಂಚಿಕೆ ಮಾಡುವಲ್ಲಿ ಮಧು ಕೋಡಾ ಮತ್ತು ಸರ್ಕಾರದ ಅಧಿಕಾರಿಗಳು ಸಂಚು ರೂಪಿಸಿದ್ದರು ಎಂದು ವಿಶೇಷ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.