ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಕೊರತೆಯಿದೆ. ಮಹದಾಯಿ ವಿವಾದ ಪ್ರತಿದಿನ ರಾಜಕೀಯ ಆಯಾಮ ಪಡೆದುಕೊಳ್ಳುತ್ತಿದೆ. ಇದರಿಂದ ಜನರ ಸಮಸ್ಯೆ ಹೆಚ್ಚುತ್ತಿದೆ. ಪ್ರಧಾನಿ ಮೋದಿ ತಕ್ಷಣ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಕಾಂಗ್ರೆಸ್ ಸಂಸದರು ಧ್ವನಿಗೂಡಿಸಿದರು.