<p><strong>ಚಾಮರಾಜನಗರ: </strong>ಜಿಲ್ಲೆಯ ಸುಪ್ರಸಿದ್ಧ ಚಿಕ್ಕಲ್ಲೂರು ಜಾತ್ರೆಯ ಆರಂಭದ ದಿನವಾದ ಮಂಗಳವಾರ ರಾತ್ರಿ ಜರುಗಿದ ಚಂದ್ರಮಂಡಲ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.</p>.<p>ಚಂದ್ರಮಂಡಲಕ್ಕೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ‘ಧರೆಗೆ ದೊಡ್ಡವರಾದ ಮಂಟೇಸ್ವಾಮಿ ಅವರ ಪಾದಕ್ಕೆ ಉಘೇ, ಕತ್ತಲ ರಾಜ್ಯದಲ್ಲಿ ಪರಂಜ್ಯೋತಿಯಾಗಿ ಬೆಳಗಿದ ಸಿದ್ದಪ್ಪಾಜಿಯವರ ಚಂದ್ರಮಂಡಲಕ್ಕೆ ಉಘೇ’ ಎಂಬ ಭಕ್ತರ ಉದ್ಘೋಷ ಜಾತ್ರೆಯಾದ್ಯಂತ ಮಾರ್ದನಿಸಿತು. ದೇವಸ್ಥಾನದ ಸುತ್ತಲೂ ನೆರೆದಿದ್ದ ಭಕ್ತರು ಚಂದ್ರಮಂಡಲದ ಬೆಳಗನ್ನು ಕಣ್ತುಂಬಿಕೊಂಡರು.</p>.<p>ಹೂವು, ಹೊಂಬಾಳೆ, ಬಾಳೆಕಂದು, ಮಾವಿನ ತೋರಣಗಳಿಂದ ಚಂದ್ರಮಂಡಲ ಕಟ್ಟೆಯನ್ನು ಸಿಂಗರಿಸಲಾಗಿತ್ತು. ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠದ ಪೀಠಾಧಿಪತಿ ಜ್ಞಾನಾನಂದ ಚೆನ್ನರಾಜೇ ಅರಸು ಅವರು ಮಂಗಳಾರತಿ ಬೆಳಗಿಸಿ ಚಂದ್ರಮಂಡಲಕ್ಕೆ ಅಗ್ನಿ ಸ್ಪರ್ಶ ಮಾಡಿದರು.</p>.<p>ಭಕ್ತರು ಚಂದ್ರಮಂಡಲ ಜ್ಯೋತಿಗೆ ದವಸಧಾನ್ಯ, ಹಣ್ಣು, ಜವನ, ನಗನಾಣ್ಯಗಳನ್ನು ಎಸೆಯುವುದರ ಮೂಲಕ ತಮ್ಮ ಹರಕೆ ಸಲ್ಲಿಸಿದರು. ಬೆಂಗಳೂರು, ಮೈಸೂರು, ಕನಕಪುರ, ರಾಮನಗರ, ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಜನಸಾಗರ ಹರಿದು ಬಂದಿತ್ತು. ನೆರೆದಿದ್ದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>ಬೂದಿಗಾಗಿ ಮುಗಿಬಿದ್ದ ಭಕ್ತರು: ಚಂದ್ರಮಂಡಲ ಹತ್ತಿ ಉರಿದು ಕೆಳಗೆ ಬೀಳುತ್ತಿದ್ದಂತೆ ಭಕ್ತರು ಬೂದಿಯನ್ನು ತೆಗೆದುಕೊಳ್ಳಲು ಮುಗಿಬಿದ್ದರು.<br /> ನೀಲಗಾರರ ಪರಂಪರೆಯಲ್ಲಿ ಅತ್ಯಂತ ಶ್ರೇಷ್ಠ ಎಂದು ನಂಬಿರುವ ಬೂದಿಯನ್ನು ‘ಕಪ್ಪುದೂಳ್ತ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲೆಯ ಸುಪ್ರಸಿದ್ಧ ಚಿಕ್ಕಲ್ಲೂರು ಜಾತ್ರೆಯ ಆರಂಭದ ದಿನವಾದ ಮಂಗಳವಾರ ರಾತ್ರಿ ಜರುಗಿದ ಚಂದ್ರಮಂಡಲ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.</p>.<p>ಚಂದ್ರಮಂಡಲಕ್ಕೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ‘ಧರೆಗೆ ದೊಡ್ಡವರಾದ ಮಂಟೇಸ್ವಾಮಿ ಅವರ ಪಾದಕ್ಕೆ ಉಘೇ, ಕತ್ತಲ ರಾಜ್ಯದಲ್ಲಿ ಪರಂಜ್ಯೋತಿಯಾಗಿ ಬೆಳಗಿದ ಸಿದ್ದಪ್ಪಾಜಿಯವರ ಚಂದ್ರಮಂಡಲಕ್ಕೆ ಉಘೇ’ ಎಂಬ ಭಕ್ತರ ಉದ್ಘೋಷ ಜಾತ್ರೆಯಾದ್ಯಂತ ಮಾರ್ದನಿಸಿತು. ದೇವಸ್ಥಾನದ ಸುತ್ತಲೂ ನೆರೆದಿದ್ದ ಭಕ್ತರು ಚಂದ್ರಮಂಡಲದ ಬೆಳಗನ್ನು ಕಣ್ತುಂಬಿಕೊಂಡರು.</p>.<p>ಹೂವು, ಹೊಂಬಾಳೆ, ಬಾಳೆಕಂದು, ಮಾವಿನ ತೋರಣಗಳಿಂದ ಚಂದ್ರಮಂಡಲ ಕಟ್ಟೆಯನ್ನು ಸಿಂಗರಿಸಲಾಗಿತ್ತು. ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠದ ಪೀಠಾಧಿಪತಿ ಜ್ಞಾನಾನಂದ ಚೆನ್ನರಾಜೇ ಅರಸು ಅವರು ಮಂಗಳಾರತಿ ಬೆಳಗಿಸಿ ಚಂದ್ರಮಂಡಲಕ್ಕೆ ಅಗ್ನಿ ಸ್ಪರ್ಶ ಮಾಡಿದರು.</p>.<p>ಭಕ್ತರು ಚಂದ್ರಮಂಡಲ ಜ್ಯೋತಿಗೆ ದವಸಧಾನ್ಯ, ಹಣ್ಣು, ಜವನ, ನಗನಾಣ್ಯಗಳನ್ನು ಎಸೆಯುವುದರ ಮೂಲಕ ತಮ್ಮ ಹರಕೆ ಸಲ್ಲಿಸಿದರು. ಬೆಂಗಳೂರು, ಮೈಸೂರು, ಕನಕಪುರ, ರಾಮನಗರ, ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಜನಸಾಗರ ಹರಿದು ಬಂದಿತ್ತು. ನೆರೆದಿದ್ದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>ಬೂದಿಗಾಗಿ ಮುಗಿಬಿದ್ದ ಭಕ್ತರು: ಚಂದ್ರಮಂಡಲ ಹತ್ತಿ ಉರಿದು ಕೆಳಗೆ ಬೀಳುತ್ತಿದ್ದಂತೆ ಭಕ್ತರು ಬೂದಿಯನ್ನು ತೆಗೆದುಕೊಳ್ಳಲು ಮುಗಿಬಿದ್ದರು.<br /> ನೀಲಗಾರರ ಪರಂಪರೆಯಲ್ಲಿ ಅತ್ಯಂತ ಶ್ರೇಷ್ಠ ಎಂದು ನಂಬಿರುವ ಬೂದಿಯನ್ನು ‘ಕಪ್ಪುದೂಳ್ತ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>