‘ಒಳಮೀಸಲಾತಿಯಿಂದ ದಲಿತರ ಏಕತೆಗೆ ಧಕ್ಕೆ ಬರುತ್ತದೆ’ ಎನ್ನುವ ಅವರು, 1932ರ ದಲಿತರ ಪಾಲಿನ ಮರಣಶಾಸನ ಎನ್ನಲಾದ ‘ಪೂನಾ ಒಪ್ಪಂದ’ದ ಕುರಿತು ಏನು ಹೇಳುತ್ತಾರೆ? ಅಂಬೇಡ್ಕರ್ ಅವರನ್ನು ಮಣಿಸಲು ಗಾಂಧಿ ಬಳಸಿದ್ದು ಇದೇ ಐಕ್ಯ ಮಂತ್ರವನ್ನಲ್ಲವೇ? ದಲಿತರ ವಿಷಯದಲ್ಲಿ ಗಾಂಧಿ ನಡೆದುಕೊಂಡ ರೀತಿ ತಪ್ಪು ಎನ್ನುವುದಾದರೆ, ಮಾದಿಗರು ‘ನಮಗೆ ಅನ್ಯಾಯವಾಗಿದೆ, ಒಳಮೀಸಲಾತಿ ಕೊಡಿ’ ಎನ್ನುವುದು ಹೇಗೆ ತಪ್ಪಾಗುತ್ತದೆ?