ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇವು ಹಗರಣದಲ್ಲಿ ತಪ್ಪಿತಸ್ಥ ಲಾಲುಗೆ ಶಿಕ್ಷೆ ಇಂದು ಪ್ರಕಟ

Last Updated 2 ಜನವರಿ 2018, 19:36 IST
ಅಕ್ಷರ ಗಾತ್ರ

ರಾಂಚಿ: ಮೇವು ಹಗರಣದಲ್ಲಿ ತಪ್ಪಿತಸ್ಥರಾಗಿ ಜೈಲು ಸೇರಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ದೇವಗಡ ಖಜಾನೆಯಿಂದ ಅಕ್ರಮವಾಗಿ ₹89 ಲಕ್ಷ ಹಣ ಪಡೆದ ಪ್ರಕರಣದಲ್ಲಿ ಲಾಲು ದೋಷಿ ಎಂದು ನ್ಯಾಯಾಲಯ ಹೇಳಿತ್ತು.

ಬಹು ಕೋಟಿ ಮೇವು ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ತಪ್ಪಿತಸ್ಥ ಎಂದು ಶನಿವಾರ(ಡಿ.23) ತೀರ್ಪು ಪ್ರಕಟಿಸಿದ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ, ಲಾಲುರನ್ನು ಪೊಲೀಸರ ವಶಕ್ಕೆ ನೀಡಿತ್ತು.

ಪ್ರಕರಣದಲ್ಲಿ ಲಾಲು ಪ್ರಸಾದ್‌ ಸೇರಿದಂತೆ 15 ಜನ ದೋಷಿಗಳು. ಬಿಹಾರದ ಮಾಜಿ ಮುಖ್ಯಮಂತ್ರಿ ಡಾ.ಜಗನ್ನಾಥ್‌ ಮಿಶ್ರಾ ಸೇರಿದಂತೆ ಏಳು ಮಂದಿ ನಿರ್ದೋಷಿಗಳುಗಳು ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾಯಾಲಯ ಲಾಲು ಸೇರಿದಂತೆ 15 ತಪ್ಪಿತಸ್ಥರ ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸಲಿದೆ. ನ್ಯಾಯಾಲಯ ತೀರ್ಪು ಪ್ರಕಟಿಸಿ ಆದೇಶ ನೀಡುತ್ತಿದ್ದಂತೆ ತಕ್ಷಣ ಲಾಲು ಪ್ರಸಾದ್‌ ಸೇರಿದಂತೆ ದೋಷಿಗಳನ್ನು ಬಂಧನಕ್ಕೆ ಒಳಪಡಿಸಲಾಗಿತ್ತು. ಲಾಲುರನ್ನು ವಶಕ್ಕೆ ಪಡೆ ಪೊಲೀಸರು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದರು.

1997ರ ಅಕ್ಟೋಬರ್ 27ರಂದು 38 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಅವರಲ್ಲಿ ಹನ್ನೊಂದು ಮಂದಿ ಮೃತಪಟ್ಟಿದ್ದಾರೆ ಮತ್ತು ಮೂರು ಮಂದಿ ಮಾಫಿ ಸಾಕ್ಷಿ ನೀಡಿದರು. ಇಬ್ಬರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT