ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೇಶ್ ರೈ ಚಟ್ಲಗೆ ಅಭಿಮಾನಿ ಪ್ರಶಸ್ತಿ

Last Updated 2 ಜನವರಿ 2018, 19:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2017ನೇ ಸಾಲಿನ ‘ಅಭಿಮಾನಿ’ ಪ್ರಶಸ್ತಿಗೆ ‘ಪ್ರಜಾವಾಣಿ’ಯ ರಾಜೇಶ್ ರೈ ಚಟ್ಲ ಭಾಜನರಾಗಿದ್ದಾರೆ.

ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನಕ್ಕೆ ಈ ಪ್ರಶಸ್ತಿ ನೀಡಲಾಗುತ್ತದೆ. ಲೈಂಗಿಕ ವೃತ್ತಿಯಲ್ಲಿರುವ ಮಹಿಳೆಯರ ಸಮಸ್ಯೆಗಳ ಕುರಿತು ‘‍ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ದಂಧೆಯ ಒಡಲಾಳ’ ಲೇಖನಕ್ಕೆ ಈ ಪ್ರಶಸ್ತಿ ಲಭಿಸಿದೆ.

ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನಕ್ಕೆ ನೀಡುವ ‘ಮೈಸೂರು ದಿಗಂತ ಪ್ರಶಸ್ತಿ’ಗೆ ಕೋಲಾರದ ‘ಕನ್ನಡ ತಿಲಕ’ ಪತ್ರಿಕೆಯಲ್ಲಿ ಕಲಾವಿದ ವಿಷ್ಣು ಬರೆದ ‘ಆಡು–ದನ ಆರ್ತಾಲಾಪ... ಮನುಷ್ಯರನ್ನು ಪ್ರೀತಿ ವಿಶ್ವಾಸದಿಂದ ಕಾಣಿ’ ಎಂಬ ಲೇಖನ ಆಯ್ಕೆಯಾಗಿದೆ. ಎರಡೂ ಪ್ರಶಸ್ತಿಗಳು ₹ 10,000 ನಗದು ಪುರಸ್ಕಾರ ಒಳಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT