ಮತ್ತೊಮ್ಮೆ ಭೂಮಿ ಪೂಜೆ: ಶಂಕುಸ್ಥಾಪನೆ ನೆರವೇರಿಸಿ 2 ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿರಲಿಲ್ಲ. ಮನು ಬಳಿಗಾರ್ ಅವರು ಪರಿಷತ್ತಿನ ಅಧ್ಯಕ್ಷರಾದ ಬಳಿಕ 2016ರ ಮಾರ್ಚ್ನಲ್ಲಿ ಮತ್ತೆ ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಕಟ್ಟಡ ಕಾಮಗಾರಿ ಆರಂಭಿಸಲಾಯಿತು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಪರಿಷತ್ತಿನ ಖಜಾಂಚಿ ಪಿ. ಮಲ್ಲಿಕಾರ್ಜುನಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.