ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ದೂರವಾಣಿ ಸಂಭಾಷಣೆ ವಿವರ, ನಿರ್ದಿಷ್ಠ ಸಂಘಟನೆಯ ಕಾರ್ಯಕರ್ತರಲ್ಲಿ ಭೀತಿ ಮೂಡಿಸಲು ಈ ಹತ್ಯೆ ಮಾಡಿರುವ ಕುರಿತಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಹೀಗಾಗಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಎನ್ಐಎ ವಕೀಲ ಪಿ. ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.