<p><strong>ರಾಮನಗರ: </strong>ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಪ್ಯಾರ ಮೆಡಿಕಲ್ ವಿದ್ಯಾರ್ಥಿಯೊಬ್ಬ ಸಹಪಾಠಿಯನ್ನೇ ಚಾಕುವಿನಿಂದ ಮೂರು ಕಡೆ ಇರಿದು ಗಾಯಗೊಳಿಸಿದ್ದಾನೆ.</p>.<p>ಬೆಳಿಗ್ಗೆ 10ರ ಸುಮಾರಿಗೆ ಮಕ್ಕಳ ವಿಭಾಗದ ಕೊಠಡಿಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿನ ರೋಗಿಗಳು , ಅವರ ಸಂಬಂಧಿಕರು ಹಾಗೂ ಅಲ್ಲಿನ ಸಿಬ್ಬಂದಿ ಬೆಚ್ಚಿ ಬಿದ್ದರು. ಜಿಲ್ಲಾ ಆಸ್ಪತ್ರೆಯ ಪ್ಯಾರ ಮೆಡಿಕಲ್ ಎರಡನೇ ವರ್ಷದ ವಿದ್ಯಾರ್ಥಿ ವಿಘ್ನೇಶ್ (20) ಇರಿತಕ್ಕೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಚಾಕುವಿನಿಂದ ಇರಿದು ಸಿದ್ದರಾಜು ಪರಾರಿಯಾಗಿದ್ದಾನೆ.</p>.<p>ಈ ಇಬ್ಬರು ಸಹಪಾಠಿಗಳ ನಡುವೆ ಸೋಮವಾರ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಸ್ನೇಹಿತರ ಗುಂಪು ಕಟ್ಟಿಕೊಂಡು ಬಂದ ಸಿದ್ದರಾಜು, ವಿಘ್ನೇಶ್ ಅವರನ್ನು ಕೆಣಕಿದ್ದಾನೆ. ಆಗ ಮಾತಿಗೆ ಮಾತು ಬೆಳೆದಿದೆ. ಬಳಿಕ ಇಬ್ಬರೂ ನಂ. 14 ಕೊಠಡಿಗೆ ತೆರಳಿದ್ದು, ಅಲ್ಲಿ ಈ ಘಟನೆ ನಡೆದಿದೆ. ಕೊಠಡಿಯಲ್ಲಿ ಇದ್ದವರು ಬೆಚ್ಚಿ ಬಿದ್ದು ಹೊರಗೆ ಓಡಿ ಬಂದಿದ್ದಾರೆ.</p>.<p>‘ಸಿದ್ದರಾಜು ಕಾಮಾಕ್ಷಿಪಾಳ್ಯದವನಾಗಿದ್ದು, ಆತನಿಗೂ ನನಗೂ ನಿನ್ನೆ ಗಲಾಟೆ ಆಗಿತ್ತು. ಬೆಳಿಗ್ಗೆ ಗುಂಪು ಕಟ್ಟಿಕೊಂಡು ಬಂದು ನನ್ನನ್ನು ಹೆದರಿಸಿದ. ನಾನು ಯಾವುದಕ್ಕೂ ಹೆದರದೆ ಹೋದಾಗ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿದ’ ಎಂದು ಗಾಯಾಳು ವಿಘ್ನೇಶ್ ಪತ್ರಕರ್ತರಿಗೆ ವಿವರಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ವಿವೇಕ್ ದೊರೆ ಆಸ್ಪತ್ರೆಯ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಿದರು.</p>.<p>‘ಆಸ್ಪತ್ರೆಯ ಒಳಗೆ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪೊಲೀಸರಿಗೆ ನಾವೂ ದೂರು ನೀಡಿದ್ದೇವೆ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಪ್ಯಾರ ಮೆಡಿಕಲ್ ವಿದ್ಯಾರ್ಥಿಯೊಬ್ಬ ಸಹಪಾಠಿಯನ್ನೇ ಚಾಕುವಿನಿಂದ ಮೂರು ಕಡೆ ಇರಿದು ಗಾಯಗೊಳಿಸಿದ್ದಾನೆ.</p>.<p>ಬೆಳಿಗ್ಗೆ 10ರ ಸುಮಾರಿಗೆ ಮಕ್ಕಳ ವಿಭಾಗದ ಕೊಠಡಿಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿನ ರೋಗಿಗಳು , ಅವರ ಸಂಬಂಧಿಕರು ಹಾಗೂ ಅಲ್ಲಿನ ಸಿಬ್ಬಂದಿ ಬೆಚ್ಚಿ ಬಿದ್ದರು. ಜಿಲ್ಲಾ ಆಸ್ಪತ್ರೆಯ ಪ್ಯಾರ ಮೆಡಿಕಲ್ ಎರಡನೇ ವರ್ಷದ ವಿದ್ಯಾರ್ಥಿ ವಿಘ್ನೇಶ್ (20) ಇರಿತಕ್ಕೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಚಾಕುವಿನಿಂದ ಇರಿದು ಸಿದ್ದರಾಜು ಪರಾರಿಯಾಗಿದ್ದಾನೆ.</p>.<p>ಈ ಇಬ್ಬರು ಸಹಪಾಠಿಗಳ ನಡುವೆ ಸೋಮವಾರ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಸ್ನೇಹಿತರ ಗುಂಪು ಕಟ್ಟಿಕೊಂಡು ಬಂದ ಸಿದ್ದರಾಜು, ವಿಘ್ನೇಶ್ ಅವರನ್ನು ಕೆಣಕಿದ್ದಾನೆ. ಆಗ ಮಾತಿಗೆ ಮಾತು ಬೆಳೆದಿದೆ. ಬಳಿಕ ಇಬ್ಬರೂ ನಂ. 14 ಕೊಠಡಿಗೆ ತೆರಳಿದ್ದು, ಅಲ್ಲಿ ಈ ಘಟನೆ ನಡೆದಿದೆ. ಕೊಠಡಿಯಲ್ಲಿ ಇದ್ದವರು ಬೆಚ್ಚಿ ಬಿದ್ದು ಹೊರಗೆ ಓಡಿ ಬಂದಿದ್ದಾರೆ.</p>.<p>‘ಸಿದ್ದರಾಜು ಕಾಮಾಕ್ಷಿಪಾಳ್ಯದವನಾಗಿದ್ದು, ಆತನಿಗೂ ನನಗೂ ನಿನ್ನೆ ಗಲಾಟೆ ಆಗಿತ್ತು. ಬೆಳಿಗ್ಗೆ ಗುಂಪು ಕಟ್ಟಿಕೊಂಡು ಬಂದು ನನ್ನನ್ನು ಹೆದರಿಸಿದ. ನಾನು ಯಾವುದಕ್ಕೂ ಹೆದರದೆ ಹೋದಾಗ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿದ’ ಎಂದು ಗಾಯಾಳು ವಿಘ್ನೇಶ್ ಪತ್ರಕರ್ತರಿಗೆ ವಿವರಿಸಿದರು.</p>.<p>ಜಿಲ್ಲಾ ಶಸ್ತ್ರಚಿಕಿತ್ಸಕ ವಿವೇಕ್ ದೊರೆ ಆಸ್ಪತ್ರೆಯ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಿದರು.</p>.<p>‘ಆಸ್ಪತ್ರೆಯ ಒಳಗೆ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪೊಲೀಸರಿಗೆ ನಾವೂ ದೂರು ನೀಡಿದ್ದೇವೆ’ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>