ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಸದಸ್ಯ ಮುನಿಸ್ವಾಮಿ ವಿರುದ್ಧ ದೂರಿಗೆ ಆಕ್ಷೇಪಣೆ: ಪ್ರತಿಭಟನೆ

Last Updated 2 ಜನವರಿ 2018, 20:41 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಕ್ಷೇತ್ರದ ಕಾಡುಗೋಡಿ ವಾರ್ಡ್‌ ಪಾಲಿಕೆ ಸದಸ್ಯ ಎಸ್.ಮುನಿಸ್ವಾಮಿ ವಿರುದ್ಧ ನೀಡಿರುವ ದೂರಿಗೆ ಆಕ್ಷೇಪ ವ್ಯಕ್ತಪಡಿಸಿದ ನೂರಾರು ಮಂದಿ ಮಂಗಳವಾರ ಕಾಡುಗೋಡಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದರು.

‘ರಸ್ತೆ ವಿಸ್ತರಣೆ ಕಾಮಗಾರಿ ವಿಚಾರವಾಗಿ ಮುನಿಸ್ವಾಮಿ ಅವರು ಸೀರೆ ಎಳೆದು ಹಾಗೂ ಕಪಾಳಕ್ಕೆ ಹೊಡೆದು ಅಪಮಾನ ಮಾಡಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಕಾಡುಗೋಡಿ ಠಾಣೆಗೆ ದೂರು ನೀಡಿದ್ದರು.

‘ಈ ಕ್ಷೇತ್ರದಲ್ಲಿ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಜೆಪಿ ಪಾಲಿಕೆ ಸದಸ್ಯರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ, ಕಾಂಗ್ರೆಸ್‌ ಸದಸ್ಯರು ಈ ರೀತಿ ತೇಜೋವಧೆ ಮಾಡುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT