ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಟಿ. ರಘುಮೂರ್ತಿ, ‘ಮೊಳಕಾಲ್ಮುರು, ಚಳ್ಳಕೆರೆ, ಕೂಡ್ಲಿಗಿ, ಪಾವಗಡ ತಾಲ್ಲೂಕುಗಳು ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ 52 ಗ್ರಾಮಗಳ ಅಂದಾಜು 1000ಕ್ಕೂ ಹೆಚ್ಚು ಜನವಸತಿಗಳ 12–13 ಲಕ್ಷ ಜನರಿಗೆ ಇದರಿಂದ ಶುದ್ಧ ಕುಡಿಯುವ ನೀರು ದೊರೆಯಲಿದೆ. ಮುಖ್ಯಮಂತ್ರಿ ಚಳ್ಳಕೆರೆ ಸಾಧನೆ ಸಮಾವೇಶದಲ್ಲಿ ನೀಡಿದ್ದ ಭರವಸೆ ಪ್ರಕಾರ ಅನುಮೋದನೆ ನೀಡಿರುವುದು ಶ್ಲಾಘನೀಯ’ ಎಂದು ಹೇಳಿದರು.