ಪುಣೆ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಲೀದ್ ವಿರುದ್ಧ ಪುಣೆಯಲ್ಲಿ ದೂರು ದಾಖಲಾಗಿದೆ.
ಡಿಸೆಂಬರ್ 31ರಂದು ಎಲ್ಗಾರ್ ಪರಿಷದ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಉಮರ್ ಖಲೀದ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಅಕ್ಷಯ್ ಬಿಕಂದ್ ಮತ್ತು ಆನಂದ್ ದೋಂಡ್ ಎಂಬುವರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೀಮಾ ಕೋರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದ ಬಳಿಕ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಇಂದು ಮುಂಬೈ ಮತ್ತು ಪುಣೆಯಲ್ಲಿ ಬಂದ್ ನಡೆಸಲಾಗುತ್ತಿದೆ.