ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ‘ವೀರಶೈವ ಲಿಂಗಾಯತರ ಬಗ್ಗೆ ಏಳು ತಿಂಗಳ ಬಳಿಕ ಮೊದಲ ಬಾರಿಗೆ ಬಾಯಿಬಿಟ್ಟಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಸ್ವಾಗತಿಸುತ್ತೇನೆ. ಆದರೆ, ಅವರ ಶಾಲಾ ಪ್ರಮಾಣ ಪತ್ರದಲ್ಲಿ ವೀರಶೈವ ಇದೆಯೋ ಅಥವಾ ಲಿಂಗಾಯತ ಎಂದು ಬರೆದಿದೆಯೋ ಎನ್ನುವುದನ್ನು ಸ್ಪಷ್ಟಪಡಿಸಲಿ’ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸವಾಲು ಹಾಕಿದರು.