<p><strong>ಬೆಂಗಳೂರು: </strong>ಜಯನಗರ 1ನೇ ಬ್ಲಾಕ್ನಲ್ಲಿ ಉದ್ಯಾನವನ ಮತ್ತು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿದ್ದ ₹200 ಕೋಟಿ ಮೌಲ್ಯದ 2 ಎಕರೆ 39 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಆಪಾದಿಸಿದರು.</p>.<p>‘ಅಶೋಕ್ ಧಾರಿವಾಲ ಎಂಬುವವರಿಗೆ ಲಾಭ ಮಾಡಿಕೊಡಲು ಮುಂದಾದ ಸಿದ್ದರಾಮಯ್ಯ, 2014ರ ಜನವರಿ 27ರಂದು ‘ರಿ–ಡೂ’ ಹೆಸರಿನಲ್ಲಿ ಈ ಭೂಮಿಯನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದಾರೆ’ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>‘ಜಮೀನು ಡಿನೋಟಿಫೈ ಮಾಡಿಲ್ಲ. ಹೈಕೋರ್ಟ್ ಆದೇಶ ಪಾಲನೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.</p>.<p><strong>ಅಶೋಕ್ ಆರೋಪ: </strong>ಲಾಲ್ಬಾಗ್ ಸಿದ್ದಾಪುರ (ಈಗ ಜಯನಗರ 1 ನೇ ಬ್ಲಾಕ್ಗೆ ಸೇರಿರುವ) ಗ್ರಾಮದ 27/1, 28/4, 28/5, 28/6 ಸರ್ವೆ ನಂಬರ್ಗಳಲ್ಲಿನ ಒಟ್ಟು 2ಎಕರೆ 39ಗುಂಟೆ ಭೂಮಿಯನ್ನು ಮೈಸೂರು ಮಹಾರಾಜರ ಕಾಲದಲ್ಲೇ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡಲಾಗಿದೆ.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಡಾವಣೆ ನಿರ್ಮಾಣ ಮಾಡಿದಾಗಲೂ ಈ ಉದ್ದೇಶಕ್ಕೆ ಬಿಡಲಾಗಿದೆ. ಇಲ್ಲಿಯವರೆಗಿನ ಯಾವುದೇ ಮುಖ್ಯಮಂತ್ರಿಯೂ ಈ ಭೂಮಿಯನ್ನು ಡಿನೋಟಿಫೈ ಮಾಡಿರಲಿಲ್ಲ. ಆದರೆ, ಮೈಸೂರಿನವರೇ ಆದ ಸಿದ್ದರಾಮಯ್ಯ ಡಿನೋಡಿಫೈ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ, ಕೋರ್ಟ್ ತೀರ್ಪು ಉಲ್ಲಂಘಿಸಿದ್ದಾರೆ ಎಂದು ಟೀಕಿಸಿದರು.</p>.<p>ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದರೆ ಪ್ರಯೋಜನವಾಗುವುದಿಲ್ಲ. ಸರ್ಕಾರ ಭೂಮಿಯನ್ನು ವಾಪಸ್ ಪಡೆದು, ಮೂಲ ಉದ್ದೇಶಕ್ಕೆ ಮೀಸಲಿಡಲು ಮುಂದಾಗುವವರೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.</p>.<p><strong>ಹೈಕೋರ್ಟ್ ಆದೇಶ ಪಾಲನೆ:</strong> ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.</p>.<p>ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.</p>.<p><strong>ಹೈಕೋರ್ಟ್ ಆದೇಶ ಪಾಲನೆ: ಬಿ.ಎಲ್. ಶಂಕರ್ </strong><br /> ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.</p>.<p>ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.</p>.<p>*<br /> ರಿಯಲ್ ಎಸ್ಟೇಟ್ ಏಜೆಂಟ್ ಅಶೋಕ್ ಧಾರಿವಾಲಗಾಗಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ. ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ.<br /> <em><strong>–ಆರ್. ಅಶೋಕ್, ಬಿಜೆಪಿ ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಯನಗರ 1ನೇ ಬ್ಲಾಕ್ನಲ್ಲಿ ಉದ್ಯಾನವನ ಮತ್ತು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿದ್ದ ₹200 ಕೋಟಿ ಮೌಲ್ಯದ 2 ಎಕರೆ 39 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಆಪಾದಿಸಿದರು.</p>.<p>‘ಅಶೋಕ್ ಧಾರಿವಾಲ ಎಂಬುವವರಿಗೆ ಲಾಭ ಮಾಡಿಕೊಡಲು ಮುಂದಾದ ಸಿದ್ದರಾಮಯ್ಯ, 2014ರ ಜನವರಿ 27ರಂದು ‘ರಿ–ಡೂ’ ಹೆಸರಿನಲ್ಲಿ ಈ ಭೂಮಿಯನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದಾರೆ’ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.</p>.<p>‘ಜಮೀನು ಡಿನೋಟಿಫೈ ಮಾಡಿಲ್ಲ. ಹೈಕೋರ್ಟ್ ಆದೇಶ ಪಾಲನೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.</p>.<p><strong>ಅಶೋಕ್ ಆರೋಪ: </strong>ಲಾಲ್ಬಾಗ್ ಸಿದ್ದಾಪುರ (ಈಗ ಜಯನಗರ 1 ನೇ ಬ್ಲಾಕ್ಗೆ ಸೇರಿರುವ) ಗ್ರಾಮದ 27/1, 28/4, 28/5, 28/6 ಸರ್ವೆ ನಂಬರ್ಗಳಲ್ಲಿನ ಒಟ್ಟು 2ಎಕರೆ 39ಗುಂಟೆ ಭೂಮಿಯನ್ನು ಮೈಸೂರು ಮಹಾರಾಜರ ಕಾಲದಲ್ಲೇ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡಲಾಗಿದೆ.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಡಾವಣೆ ನಿರ್ಮಾಣ ಮಾಡಿದಾಗಲೂ ಈ ಉದ್ದೇಶಕ್ಕೆ ಬಿಡಲಾಗಿದೆ. ಇಲ್ಲಿಯವರೆಗಿನ ಯಾವುದೇ ಮುಖ್ಯಮಂತ್ರಿಯೂ ಈ ಭೂಮಿಯನ್ನು ಡಿನೋಟಿಫೈ ಮಾಡಿರಲಿಲ್ಲ. ಆದರೆ, ಮೈಸೂರಿನವರೇ ಆದ ಸಿದ್ದರಾಮಯ್ಯ ಡಿನೋಡಿಫೈ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ, ಕೋರ್ಟ್ ತೀರ್ಪು ಉಲ್ಲಂಘಿಸಿದ್ದಾರೆ ಎಂದು ಟೀಕಿಸಿದರು.</p>.<p>ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದರೆ ಪ್ರಯೋಜನವಾಗುವುದಿಲ್ಲ. ಸರ್ಕಾರ ಭೂಮಿಯನ್ನು ವಾಪಸ್ ಪಡೆದು, ಮೂಲ ಉದ್ದೇಶಕ್ಕೆ ಮೀಸಲಿಡಲು ಮುಂದಾಗುವವರೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.</p>.<p><strong>ಹೈಕೋರ್ಟ್ ಆದೇಶ ಪಾಲನೆ:</strong> ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.</p>.<p>ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.</p>.<p><strong>ಹೈಕೋರ್ಟ್ ಆದೇಶ ಪಾಲನೆ: ಬಿ.ಎಲ್. ಶಂಕರ್ </strong><br /> ಲಾಲ್ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.</p>.<p>ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.</p>.<p>*<br /> ರಿಯಲ್ ಎಸ್ಟೇಟ್ ಏಜೆಂಟ್ ಅಶೋಕ್ ಧಾರಿವಾಲಗಾಗಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ. ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ.<br /> <em><strong>–ಆರ್. ಅಶೋಕ್, ಬಿಜೆಪಿ ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>