ತ್ರಿವಳಿ ತಲಾಖ್ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಹಾಗಾಗಿ ಮಸೂದೆಯನ್ನು ತುರ್ತಾಗಿ ಅಂಗೀಕರಿಸಬೇಕು ಎಂದು ಸರ್ಕಾರ ವಾದಿಸಿತು. ಆದರೆ, ಮಸೂದೆ ಸಿದ್ಧಪಡಿಸುವಾಗ ಸಂಬಂಧಪಟ್ಟವರ ಅಭಿಪ್ರಾಯ ಪಡೆದಿಲ್ಲ. ಹಾಗಾಗಿ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದವು.