ಸರ್ಕಾರಿ ಶಾಲೆಗೆ ಯಾವುದೇ ಆಸ್ತಿ ಇಲ್ಲದೇ ಇರುವುದನ್ನು ಮನಗಂಡು ಹಲವು ವರ್ಷ ಹಿಂದೆ ಸೂರಗೊಂಡನಕೊಪ್ಪದ ದಾನಿಯೊಬ್ಬರು ಸುಮಾರು 15.11 ಎಕರೆ ಜಮೀನಿನನ್ನು ದಾನವಾಗಿ ನೀಡಿ, ಅದರ ಉತ್ಪನ್ನದಲ್ಲಿ ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಕೈಗೊಳ್ಳುವಂತೆ ದಾನಪತ್ರ ಬರೆದು ಕೊಟ್ಟಿದ್ದಾರೆ. ಅದರಿಂದ ಬರುವ ಉತ್ಪನ್ನ ಮಾರಾಟದಿಂದ ಶಾಲೆಯ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದವು. ಆದರೆ, ಸಚಿವ ಸಂಪುಟ ಸಭೆಯಲ್ಲಿ ಈ ಜಾಗವನ್ನು ಸೇವಾಲಾಲ್ ಟ್ರಸ್ಟ್ಗೆ ಹಸ್ತಾಂತರ ಮಾಡಲು ತೀರ್ಮಾನಿಸಿರುವುದು ಸರಿಯಲ್ಲ ಎಂದು ತಹಶೀಲ್ದಾರ್ಗೆ ಸಲ್ಲಿಸಿದ ಮನವಿಯಲ್ಲಿ ವಿವರಿಸಲಾಗಿದೆ.