ಮುಂಬೈ: ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕದ (ಎಸಿಎಸ್ಯು) ಮುಖ್ಯಸ್ಥ ನೀರಜ್ ಕುಮಾರ್ ಅವರ ಅಧಿಕಾರ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಆಡಳಿತಾಧಿಕಾರಿಗಳ ಸಮಿತಿ (ಸಿಎಒ) ಮುಖ್ಯಸ್ಥ ವಿನೋದ್ ರಾಯ್ ತಿಳಿಸಿದರು.
ಇಲ್ಲಿ ನಡೆದ ಸಮಿತಿಯ ಸಭೆಯ ನಂತರ ಮಾತನಾಡಿದ ಅವರು ‘ಅವರ ಅಧಿಕಾರ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳಲಿದೆ’ ಎಂದು ತಿಳಿಸಿದರು.
‘ಆಟಗಾರರ ಸಂಭಾವನೆ ಹೆಚ್ಚಳಕ್ಕೆ ಸಂಬಂಧಿಸಿ ಚರ್ಚೆ ನಡೆಯುತ್ತಿದೆ’ ಎಂದಷ್ಟೇ ಅವರು ಹೇಳಿದರು.