ಪ್ರಕಾಶ ಅಂಚನ್ ಇವರ ಅಂಗಡಿ ಸ್ಥಿರ ದೂರವಾಣಿಗೆ ಕರೆ ಮಾಡಿ ‘10 ದಿನಗಳ ಒಳಗೆ ₹25 ಲಕ್ಷ ನೀಡಬೇಕು. ಇಲ್ಲದಿದ್ದಲ್ಲಿ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಈ ಹಿಂದೆ ಬಂದಿರುವ ಗತಿ ನಿಮಗೂ ಬರಲಿದೆ’ ಎಂದು ಅದೇ ಹೆಸರಿನ ವ್ಯಕ್ತಿ ಎಚ್ಚರಿಸಿದ್ದು, ಈ ಕರೆಗಳ ಬಗ್ಗೆ ಪರಾಮರ್ಶಿಸಿದ ಬಳಿಕ ಮಂಗಳವಾರ ರಾತ್ರಿ ನಗರ ಠಾಣೆ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ’ ಎಂದು ತಿಳಿಸಲಾಗಿದೆ.