<p><strong>ಬೆಂಗಳೂರು: </strong>ಆರ್.ಟಿ.ನಗರದ ಸುಲ್ತಾನ್ಪಾಳ್ಯದ ಮುಖ್ಯರಸ್ತೆ ಬಳಿಯ ಕೃಷ್ಣಪ್ಪ ಎಂಬುವರ ಮನೆಗೆ ಹೊಸ ವರ್ಷದಂದು ನುಗ್ಗಿದ ದುಷ್ಕರ್ಮಿಗಳು, ಬೀರು<br /> ವಿನಲ್ಲಿದ್ದ ₹10,000 ನಗದುಹಾಗೂ 1.19 ಕೆ.ಜಿ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.</p>.<p>ಜ.1ರಂದು ಕುಟುಂಬಸ್ಥರ ಜತೆಗೆ ಅವರು ಮೈಸೂರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದ ಕಳ್ಳರು, ಹಿಂಬದಿ ಕಿಟಕಿಯ ಗ್ರಿಲ್ಸ್ ಕತ್ತರಿಸಿ ಒಳ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>‘ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ವಶಕ್ಕೆ ಪಡೆದಿ<br /> ದ್ದೇವೆ. ಕಳ್ಳರ ಪತ್ತೆಗೆ ಪ್ರತ್ಯೇಕ ತಂಡ ರಚಿಸಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಸೆಕ್ಯೂರಿಟಿ ಗಾರ್ಡ್ ಮೇಲೆ ಸಂಶಯ: ಮೈಸೂರಿಗೆ ಹೋಗುವ ನಿಮಿತ್ತ ಮನೆಯ ಕಾವಲಿಗೆಂದು ಎರಡು ದಿನಗಳ ಮಟ್ಟಿಗೆ ನೇಪಾಳದ ಗೋವಿಂದು (22) ಎಂಬಾತನನ್ನು ಕೃಷ್ಣಪ್ಪ ಕೆಲಸಕ್ಕೆ ಇಟ್ಟುಕೊಂಡಿದ್ದರು.</p>.<p>‘ಮನೆಗೆ ಹಿಂದಿರುಗಿದಾಗ ಆತ ನಾಪತ್ತೆಯಾಗಿದ್ದ. ಆತನ ಮೊಬೈಲ್ ಸಹ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ, ಆತನೇ ಕಳ್ಳತನ ಮಾಡಿರಬಹುದು’ ಎಂದು ಕೃಷ್ಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆರ್.ಟಿ.ನಗರದ ಸುಲ್ತಾನ್ಪಾಳ್ಯದ ಮುಖ್ಯರಸ್ತೆ ಬಳಿಯ ಕೃಷ್ಣಪ್ಪ ಎಂಬುವರ ಮನೆಗೆ ಹೊಸ ವರ್ಷದಂದು ನುಗ್ಗಿದ ದುಷ್ಕರ್ಮಿಗಳು, ಬೀರು<br /> ವಿನಲ್ಲಿದ್ದ ₹10,000 ನಗದುಹಾಗೂ 1.19 ಕೆ.ಜಿ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ.</p>.<p>ಜ.1ರಂದು ಕುಟುಂಬಸ್ಥರ ಜತೆಗೆ ಅವರು ಮೈಸೂರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ತಿಳಿದ ಕಳ್ಳರು, ಹಿಂಬದಿ ಕಿಟಕಿಯ ಗ್ರಿಲ್ಸ್ ಕತ್ತರಿಸಿ ಒಳ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>‘ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾದ ದೃಶ್ಯಗಳನ್ನು ವಶಕ್ಕೆ ಪಡೆದಿ<br /> ದ್ದೇವೆ. ಕಳ್ಳರ ಪತ್ತೆಗೆ ಪ್ರತ್ಯೇಕ ತಂಡ ರಚಿಸಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಸೆಕ್ಯೂರಿಟಿ ಗಾರ್ಡ್ ಮೇಲೆ ಸಂಶಯ: ಮೈಸೂರಿಗೆ ಹೋಗುವ ನಿಮಿತ್ತ ಮನೆಯ ಕಾವಲಿಗೆಂದು ಎರಡು ದಿನಗಳ ಮಟ್ಟಿಗೆ ನೇಪಾಳದ ಗೋವಿಂದು (22) ಎಂಬಾತನನ್ನು ಕೃಷ್ಣಪ್ಪ ಕೆಲಸಕ್ಕೆ ಇಟ್ಟುಕೊಂಡಿದ್ದರು.</p>.<p>‘ಮನೆಗೆ ಹಿಂದಿರುಗಿದಾಗ ಆತ ನಾಪತ್ತೆಯಾಗಿದ್ದ. ಆತನ ಮೊಬೈಲ್ ಸಹ ಸ್ವಿಚ್ಡ್ ಆಫ್ ಆಗಿದೆ. ಹೀಗಾಗಿ, ಆತನೇ ಕಳ್ಳತನ ಮಾಡಿರಬಹುದು’ ಎಂದು ಕೃಷ್ಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>