<p><strong>ಮಂಗಳೂರು: </strong>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜನರ ಮನವೊಲಿಕೆಗೆ ಯತ್ನಿಸಿದರು.</p>.<p>ಸರ್ಕಾರ ಈಗಾಗಲೇ ₹5ಲಕ್ಷ ಮಂಜೂರು ಮಾಡಿದೆ. ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ₹5ಲಕ್ಷ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಇಂದೇ ₹10 ಲಕ್ಷ ವಿತರಿಸಲಾಗುವುದು. ದಯವಿಟ್ಟು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ಸಿಗದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಆದರೆ, ಜನರು ಮಾತ್ರ ಇದಕ್ಕೆ ಒಪ್ಪದೆ, ₹25ಲಕ್ಷ ಪರಿಹಾರವನ್ನು ಈಗಲೇ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವಿಶ್ವ ಹಿಂದೂ ಪರಿಷತ್ನ ಗೋಪಾಲ್ ಮಾತನಾಡಿ, ನಾವು ಹಣಕ್ಕಾಗಿ ಹೋರಾಟ ಮಾಡುತ್ತಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ₹10 ಲಕ್ಷ ನೀಡಿದ್ದಾರೆ. ಇಲ್ಲಿಗೆ ಮುಗಿಸೋಣ. ಅವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲಾಧಿಕಾರಿಗೆ ಗೌರವ ಕೊಟ್ಟು, ಅಂತಿಮ ಯಾತ್ರೆ ನಡೆಸೋಣ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿದರು.</p>.<p>ನಂತರ ಆಂಬುಲೆನ್ಸ್ ನಿಂದ ಶವವನ್ನು ಕೆಳಕ್ಕೆ ಇಳಿಸಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.</p>.<p>ಕೆಲವೇ ಗಂಟೆಗಳಲ್ಲಿ ಮೆರವಣಿಗೆ ಮೂಲಕ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.</p>.<p>ಗಣೇಶ್ ಕಟ್ಟೆಯ ಹಿಂದೂ ಸ್ಮಶಾನದವರೆಗೆ ಶವಯಾತ್ರೆ ನಡೆಯಲಿದ್ದು, ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ.</p>.<p>ಕ್ಷತ್ರಿಯಸಮಾಜದ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜನರ ಮನವೊಲಿಕೆಗೆ ಯತ್ನಿಸಿದರು.</p>.<p>ಸರ್ಕಾರ ಈಗಾಗಲೇ ₹5ಲಕ್ಷ ಮಂಜೂರು ಮಾಡಿದೆ. ಮುಖ್ಯಮಂತ್ರಿಗಳ ವಿಶೇಷ ಪರಿಹಾರ ನಿಧಿಯಿಂದ ₹5ಲಕ್ಷ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಇಂದೇ ₹10 ಲಕ್ಷ ವಿತರಿಸಲಾಗುವುದು. ದಯವಿಟ್ಟು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು. ಒಂದು ವೇಳೆ ಪರಿಹಾರ ಸಿಗದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.</p>.<p>ಆದರೆ, ಜನರು ಮಾತ್ರ ಇದಕ್ಕೆ ಒಪ್ಪದೆ, ₹25ಲಕ್ಷ ಪರಿಹಾರವನ್ನು ಈಗಲೇ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವಿಶ್ವ ಹಿಂದೂ ಪರಿಷತ್ನ ಗೋಪಾಲ್ ಮಾತನಾಡಿ, ನಾವು ಹಣಕ್ಕಾಗಿ ಹೋರಾಟ ಮಾಡುತ್ತಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ₹10 ಲಕ್ಷ ನೀಡಿದ್ದಾರೆ. ಇಲ್ಲಿಗೆ ಮುಗಿಸೋಣ. ಅವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲಾಧಿಕಾರಿಗೆ ಗೌರವ ಕೊಟ್ಟು, ಅಂತಿಮ ಯಾತ್ರೆ ನಡೆಸೋಣ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿದರು.</p>.<p>ನಂತರ ಆಂಬುಲೆನ್ಸ್ ನಿಂದ ಶವವನ್ನು ಕೆಳಕ್ಕೆ ಇಳಿಸಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.</p>.<p>ಕೆಲವೇ ಗಂಟೆಗಳಲ್ಲಿ ಮೆರವಣಿಗೆ ಮೂಲಕ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.</p>.<p>ಗಣೇಶ್ ಕಟ್ಟೆಯ ಹಿಂದೂ ಸ್ಮಶಾನದವರೆಗೆ ಶವಯಾತ್ರೆ ನಡೆಯಲಿದ್ದು, ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ.</p>.<p>ಕ್ಷತ್ರಿಯಸಮಾಜದ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>