<p><strong>ಉಡುಪಿ:</strong> ‘ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅದು ಒಂದು ಪರಿಪೂರ್ಣ ಶಿಕ್ಷಣ ಸಂಸ್ಥೆ ರೂಪುಗೊಳ್ಳಲು ಸಾಧ್ಯ’ ತೆಂಕನಿ ಡಿಯೂರು ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ ಅಭಿಪ್ರಾಯಪಟ್ಟರು.</p>.<p>ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಮಯ ಕೇಂದ್ರದ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಉದ್ಯೋಗ ಮೇಳ 2017ನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಕೇವಲ ಪದವಿ ಕೇಂದ್ರಗಳಾಗಿ ಉಳಿದಿವೆ. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ನಗರಗಳಿಗೆ ತೆರಳಿ ಸಂದರ್ಶನ ನೀಡುವುದು ಕಷ್ಟ ಸಾಧ್ಯ . ಬಾಲ್ಯದಿಂದಲೆ ಅದೇ ಊರಿನಲ್ಲಿ ಬೆಳೆದವರಿಗೆ ಪ್ರಾರಂಭಿಕ ಹಂತದಲ್ಲಿ ಉದ್ಯೋಗವನ್ನು ಅರಸಿಕೊಂಡು ದೂರದ ನಗರಕ್ಕೆ ತೆರಳಲು ಮಾನಸಿಕವಾಗಿ ಸಿದ್ಧರಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ತಮ್ಮಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಉದ್ಯೋಗಾವಕಾಶ ಕಲ್ಪಿಸುವುದು ಉತ್ತಮ ಎಂದು ಸಲಹೆ ನೀಡಿದರು.</p>.<p>ಉದ್ಯೋಗ ಮೇಳದಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜಿನಿಂದ ಬಂದಿದ 609 ಉದ್ಯೋಗಾಕಾಂಕ್ಷಿಗಳಲ್ಲಿ ಸುಮಾರು 238 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉದ್ಯೋಗ ಮೇಳದಲ್ಲಿ ರಾಜ್ಯದ 11 ಕಂಪೆನಿ ಭಾಗವಹಿಸಿದ್ದವು.</p>.<p>ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ರಾಜೇಂದ್ರ ನಾಯಕ, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ತರಬೇತುದಾರ ಜಗತ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಜೆ.ಎಸ್. ಉಷಾದೇವಿ , ಸಂಚಾಲಕ ಎಂ ಗಣೇಶ್ ಪೈ ಉದ್ಯಮಿ ಜಯಪ್ರಕಾಶ ಶೆಟ್ಟಿ ಇದ್ದರು.</p>.<p>ಪದವಿ ವಿಭಾಗದ ಸಂಚಾಲಕ ಎ. ಸುಬ್ರಮಣ್ಯ ಸ್ವಾಗತಿಸಿದರು, ಎಚ್.ಸಂತೋಷ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅದು ಒಂದು ಪರಿಪೂರ್ಣ ಶಿಕ್ಷಣ ಸಂಸ್ಥೆ ರೂಪುಗೊಳ್ಳಲು ಸಾಧ್ಯ’ ತೆಂಕನಿ ಡಿಯೂರು ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ ಅಭಿಪ್ರಾಯಪಟ್ಟರು.</p>.<p>ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಮಯ ಕೇಂದ್ರದ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಉದ್ಯೋಗ ಮೇಳ 2017ನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಕೇವಲ ಪದವಿ ಕೇಂದ್ರಗಳಾಗಿ ಉಳಿದಿವೆ. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ನಗರಗಳಿಗೆ ತೆರಳಿ ಸಂದರ್ಶನ ನೀಡುವುದು ಕಷ್ಟ ಸಾಧ್ಯ . ಬಾಲ್ಯದಿಂದಲೆ ಅದೇ ಊರಿನಲ್ಲಿ ಬೆಳೆದವರಿಗೆ ಪ್ರಾರಂಭಿಕ ಹಂತದಲ್ಲಿ ಉದ್ಯೋಗವನ್ನು ಅರಸಿಕೊಂಡು ದೂರದ ನಗರಕ್ಕೆ ತೆರಳಲು ಮಾನಸಿಕವಾಗಿ ಸಿದ್ಧರಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ತಮ್ಮಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಉದ್ಯೋಗಾವಕಾಶ ಕಲ್ಪಿಸುವುದು ಉತ್ತಮ ಎಂದು ಸಲಹೆ ನೀಡಿದರು.</p>.<p>ಉದ್ಯೋಗ ಮೇಳದಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜಿನಿಂದ ಬಂದಿದ 609 ಉದ್ಯೋಗಾಕಾಂಕ್ಷಿಗಳಲ್ಲಿ ಸುಮಾರು 238 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉದ್ಯೋಗ ಮೇಳದಲ್ಲಿ ರಾಜ್ಯದ 11 ಕಂಪೆನಿ ಭಾಗವಹಿಸಿದ್ದವು.</p>.<p>ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಸ್. ರಾಜೇಂದ್ರ ನಾಯಕ, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ತರಬೇತುದಾರ ಜಗತ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಜೆ.ಎಸ್. ಉಷಾದೇವಿ , ಸಂಚಾಲಕ ಎಂ ಗಣೇಶ್ ಪೈ ಉದ್ಯಮಿ ಜಯಪ್ರಕಾಶ ಶೆಟ್ಟಿ ಇದ್ದರು.</p>.<p>ಪದವಿ ವಿಭಾಗದ ಸಂಚಾಲಕ ಎ. ಸುಬ್ರಮಣ್ಯ ಸ್ವಾಗತಿಸಿದರು, ಎಚ್.ಸಂತೋಷ ನಾಯ್ಕ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>