<p><strong>ರಾಯಚೂರು:</strong> ಹಂದಿಗಳು ಕಳವಾದ ವಿಷಯಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಅಶೋಕ್ ಡಿಪೊ ಹತ್ತಿರ ಮಂಗಳವಾರ ನಡೆದಿದೆ.</p>.<p>ತಿಮ್ಮಾಪೂರಪೇಟೆ ಬಡಾವಣೆಯ ನಾರಾಯಣ(22) ಕೊಲೆಯಾದವರು. ಹಂದಿಯನ್ನು ಕಳ್ಳತನ ಮಾಡಿದ್ದಾರೆ ಎಂಬ ಸಂಶಯದಿಂದ ದೊಡ್ಡ ಲಕ್ಷ್ಮಣ ಅವರ ಗುಂಪು ರಾಡ್ ಹಾಗೂ ಕಟ್ಟಿಗೆಗಳಿಂದ ಹಲ್ಲೆ ನಡೆಸಿ ಕೊಲೆಗೈದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಮಾಹಿತಿ ಪಡೆದ ನಾರಾಯಣ ಕುಟುಂಬದವರು ಆಕ್ರೋಶದಿಂದ ದೊಡ್ಡ ಲಕ್ಷ್ಮಣ ಕುಟುಂಬದವರ ಮೇಲೆ ಹಲ್ಲೆ ಮುಂದಾದ ಘಟನೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.</p>.<p>ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ದೊಡ್ಡ ಲಕ್ಷ್ಮಣ ಸೇರಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಇದೇ ಘಟನೆಗೆ ಸಂಬಂಧಿಸಿದಂತೆ ಬೈಕ್ಗೆ ಬೆಂಕಿ ಹಚ್ಚಲಾಗಿದೆ ಎನ್ನಲಾಗಿದ್ದು, ಬೈಕ್ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಹಂದಿಗಳು ಕಳವಾದ ವಿಷಯಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಅಶೋಕ್ ಡಿಪೊ ಹತ್ತಿರ ಮಂಗಳವಾರ ನಡೆದಿದೆ.</p>.<p>ತಿಮ್ಮಾಪೂರಪೇಟೆ ಬಡಾವಣೆಯ ನಾರಾಯಣ(22) ಕೊಲೆಯಾದವರು. ಹಂದಿಯನ್ನು ಕಳ್ಳತನ ಮಾಡಿದ್ದಾರೆ ಎಂಬ ಸಂಶಯದಿಂದ ದೊಡ್ಡ ಲಕ್ಷ್ಮಣ ಅವರ ಗುಂಪು ರಾಡ್ ಹಾಗೂ ಕಟ್ಟಿಗೆಗಳಿಂದ ಹಲ್ಲೆ ನಡೆಸಿ ಕೊಲೆಗೈದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ಮಾಹಿತಿ ಪಡೆದ ನಾರಾಯಣ ಕುಟುಂಬದವರು ಆಕ್ರೋಶದಿಂದ ದೊಡ್ಡ ಲಕ್ಷ್ಮಣ ಕುಟುಂಬದವರ ಮೇಲೆ ಹಲ್ಲೆ ಮುಂದಾದ ಘಟನೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.</p>.<p>ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ದೊಡ್ಡ ಲಕ್ಷ್ಮಣ ಸೇರಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಇದೇ ಘಟನೆಗೆ ಸಂಬಂಧಿಸಿದಂತೆ ಬೈಕ್ಗೆ ಬೆಂಕಿ ಹಚ್ಚಲಾಗಿದೆ ಎನ್ನಲಾಗಿದ್ದು, ಬೈಕ್ ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>