<p><strong>ಮೈಸೂರು</strong>: ‘ಎಲ್ಲ ಪಾರಂಪರಿಕ ಕಟ್ಟಡಗಳ ನವೀಕರಣ ಹಾಗೂ ದುರಸ್ತಿಗೆ ವಿಶೇಷ ಪಾರಂಪರಿಕ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂಬುದು ಗೊತ್ತಿದ್ದರೂ ನಿರ್ಮಿತಿ ಕೇಂದ್ರದವರು ಅನುಮತಿ ಪಡೆಯುತ್ತಿಲ್ಲ ಏಕೆ’ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಕಿಡಿಕಾರಿದರು.</p>.<p>ಇಲ್ಲಿ ಬುಧವಾರ ನಡೆದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಾರಂಪರಿಕ ಕಟ್ಟಡಗಳ ನವೀಕರಣ ಹಾಗೂ ದುರಸ್ತಿಗೆ ಇರುವ ನಿಯಮ ಎಲ್ಲರಿಗೂ ಒಂದೇ. ಸರ್ಕಾರದ ಸಂಸ್ಥೆಯಾದ ನಿರ್ಮಿತಿ ಕೇಂದ್ರವೇ ಈ ನಿಯಮ ಪಾಲಿಸದೆ ಇದ್ದರೆ ಖಾಸಗಿಯವರು ಪಾಲಿಸುತ್ತಾರೆಯೇ ಎಂದು ಪ್ರಶ್ನಿಸಿದರು.</p>.<p>ನಂಜನಗೂಡಿನಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿದೆ. ಇದರ ಜತೆಗೆ, ಹೆಲಿಪ್ಯಾಡ್ ಹಾಗೂ ಉದ್ಯಾನಗಳ ನಿರ್ಮಾಣ ಕಾಮಗಾರಿಯೂ ನಡೆಯಲಿದೆ. ಆದರೆ, ಇದುವರೆಗೂ ಇಲಾಖೆ ಅನುಮತಿ ಕೋರಿ ಸಮಿತಿಗೆ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಪಾರಂಪರಿಕ ಸಮಿತಿಗೆ ಕೇವಲ ಮೈಸೂರು ಮಾತ್ರ ಸೇರುವುದಿಲ್ಲ. ನಂಜನಗೂಡು ಕೂಡ ಇದರ ವ್ಯಾಪ್ತಿಗೆ ಬರುತ್ತದೆ ಎಂಬ ವಿಷಯವನ್ನು ಯಾರೂ ಮರೆಯಬಾರದು ಎಂದು ತಿಳಿಸಿದರು.</p>.<p>ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎಸ್.ಕಾಂತರಾಜ್, ಅಧೀಕ್ಷಕ ಎಂಜಿನಿಯರ್ ಸುರೇಶ್ಬಾಬು, ನಗರಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಸೀಮಾ, ಪಾರಂಪರಿಕ ಇಲಾಖೆಯ ಉಪನಿರ್ದೇಶಕ ಗವಿಸಿದ್ಧಯ್ಯ, ವಾಸ್ತುಶಿಲ್ಪ ತಜ್ಞ ಎನ್.ಎಸ್.ನಾರಾಯಣಶಾಸ್ತ್ರಿ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಎಲ್ಲ ಪಾರಂಪರಿಕ ಕಟ್ಟಡಗಳ ನವೀಕರಣ ಹಾಗೂ ದುರಸ್ತಿಗೆ ವಿಶೇಷ ಪಾರಂಪರಿಕ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂಬುದು ಗೊತ್ತಿದ್ದರೂ ನಿರ್ಮಿತಿ ಕೇಂದ್ರದವರು ಅನುಮತಿ ಪಡೆಯುತ್ತಿಲ್ಲ ಏಕೆ’ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಕಿಡಿಕಾರಿದರು.</p>.<p>ಇಲ್ಲಿ ಬುಧವಾರ ನಡೆದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಾರಂಪರಿಕ ಕಟ್ಟಡಗಳ ನವೀಕರಣ ಹಾಗೂ ದುರಸ್ತಿಗೆ ಇರುವ ನಿಯಮ ಎಲ್ಲರಿಗೂ ಒಂದೇ. ಸರ್ಕಾರದ ಸಂಸ್ಥೆಯಾದ ನಿರ್ಮಿತಿ ಕೇಂದ್ರವೇ ಈ ನಿಯಮ ಪಾಲಿಸದೆ ಇದ್ದರೆ ಖಾಸಗಿಯವರು ಪಾಲಿಸುತ್ತಾರೆಯೇ ಎಂದು ಪ್ರಶ್ನಿಸಿದರು.</p>.<p>ನಂಜನಗೂಡಿನಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿದೆ. ಇದರ ಜತೆಗೆ, ಹೆಲಿಪ್ಯಾಡ್ ಹಾಗೂ ಉದ್ಯಾನಗಳ ನಿರ್ಮಾಣ ಕಾಮಗಾರಿಯೂ ನಡೆಯಲಿದೆ. ಆದರೆ, ಇದುವರೆಗೂ ಇಲಾಖೆ ಅನುಮತಿ ಕೋರಿ ಸಮಿತಿಗೆ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ಪಾರಂಪರಿಕ ಸಮಿತಿಗೆ ಕೇವಲ ಮೈಸೂರು ಮಾತ್ರ ಸೇರುವುದಿಲ್ಲ. ನಂಜನಗೂಡು ಕೂಡ ಇದರ ವ್ಯಾಪ್ತಿಗೆ ಬರುತ್ತದೆ ಎಂಬ ವಿಷಯವನ್ನು ಯಾರೂ ಮರೆಯಬಾರದು ಎಂದು ತಿಳಿಸಿದರು.</p>.<p>ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ.ಎಸ್.ಕಾಂತರಾಜ್, ಅಧೀಕ್ಷಕ ಎಂಜಿನಿಯರ್ ಸುರೇಶ್ಬಾಬು, ನಗರಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಸೀಮಾ, ಪಾರಂಪರಿಕ ಇಲಾಖೆಯ ಉಪನಿರ್ದೇಶಕ ಗವಿಸಿದ್ಧಯ್ಯ, ವಾಸ್ತುಶಿಲ್ಪ ತಜ್ಞ ಎನ್.ಎಸ್.ನಾರಾಯಣಶಾಸ್ತ್ರಿ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>