<p><strong>ಮಡಿಕೇರಿ:</strong> ಸ್ಥಗಿತಗೊಂಡಿರುವ ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ಮರು ಚಾಲನೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರವು ಕುಲಶಾಸ್ತ್ರ ಅಧ್ಯಯನ ನಡೆಸಲು ಮೈಸೂರು ಬುಡಕಟ್ಟು ಅಧ್ಯಯನ ಸಂಸ್ಥೆಗೆ ಈ ಹಿಂದೆ ವಹಿಸಿತ್ತು. ಜತೆಗೆ, ಅಧ್ಯಯನಕ್ಕೆ ₹ 11 ಲಕ್ಷ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು. ಆದರೆ, ಕೆಲವರು ಕುತಂತ್ರ ನಡೆಸಿದ ಪರಿಣಾಮ ಅಧ್ಯಯನ ಸ್ಥಗಿತ ಮಾಡಲಾಗಿತ್ತು. ಮರು ಚಾಲನೆ ನೀಡುವ ಮೂಲಕ ಸಾಧನಾ ಸಂಭ್ರಮವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು 1 ತಿಂಗಳು ಅಧ್ಯಯನ ನಡೆಸಿದ್ದರು. 2016 ಡಿಸೆಂಬರ್ನಲ್ಲಿ ಸ್ಥಗಿತ ಗೊಂಡಿರುವ ಅಧ್ಯಯನಕ್ಕೆ ಚಾಲನೆ ನೀಡಲು ಮರು ಆದೇಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಚಂಬಂಡ ಜನತ್, ಪುಲ್ಲೆರ ಕಾಳಪ್ಪ, ಮಂದಪಂಡ ಮನೋಜ್ ಮತ್ತು ಕೂಪದಿರ ಸಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಸ್ಥಗಿತಗೊಂಡಿರುವ ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ಮರು ಚಾಲನೆ ನೀಡಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರವು ಕುಲಶಾಸ್ತ್ರ ಅಧ್ಯಯನ ನಡೆಸಲು ಮೈಸೂರು ಬುಡಕಟ್ಟು ಅಧ್ಯಯನ ಸಂಸ್ಥೆಗೆ ಈ ಹಿಂದೆ ವಹಿಸಿತ್ತು. ಜತೆಗೆ, ಅಧ್ಯಯನಕ್ಕೆ ₹ 11 ಲಕ್ಷ ಅನುದಾನವನ್ನೂ ಬಿಡುಗಡೆ ಮಾಡಲಾಗಿತ್ತು. ಆದರೆ, ಕೆಲವರು ಕುತಂತ್ರ ನಡೆಸಿದ ಪರಿಣಾಮ ಅಧ್ಯಯನ ಸ್ಥಗಿತ ಮಾಡಲಾಗಿತ್ತು. ಮರು ಚಾಲನೆ ನೀಡುವ ಮೂಲಕ ಸಾಧನಾ ಸಂಭ್ರಮವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು 1 ತಿಂಗಳು ಅಧ್ಯಯನ ನಡೆಸಿದ್ದರು. 2016 ಡಿಸೆಂಬರ್ನಲ್ಲಿ ಸ್ಥಗಿತ ಗೊಂಡಿರುವ ಅಧ್ಯಯನಕ್ಕೆ ಚಾಲನೆ ನೀಡಲು ಮರು ಆದೇಶ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಚಂಬಂಡ ಜನತ್, ಪುಲ್ಲೆರ ಕಾಳಪ್ಪ, ಮಂದಪಂಡ ಮನೋಜ್ ಮತ್ತು ಕೂಪದಿರ ಸಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>