ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣನ ಚಿತೆಗೆ ತಮ್ಮನಿಂದ ಅಗ್ನಿಸ್ಪರ್ಶ

‘ದೀಪಕ್ ರಾವ್ ಅಮರ್ ರಹೆ’ ಘೋಷಣೆ ಮೂಲಕ ಅಂತಿಮ ವಿದಾಯ
Last Updated 4 ಜನವರಿ 2018, 9:16 IST
ಅಕ್ಷರ ಗಾತ್ರ

ಮಂಗಳೂರು: ಶಿವಾಜಿ ಕ್ಷತ್ರಿಯ ವಿಧಿವಿಧಾನಗಳ ಪ್ರಕಾರ ಬಿಜೆಪಿ ಕಾರ್ಯಕರ್ತ ದೀಪಕ್ ಸಹೋದರ ಸತೀಶ್ ಅಂತಿಮ ಸಂಸ್ಕಾರ ನೆರವೇರಿಸಿದರು.

ಜನತಾ ಕಾಲೋನಿಯ ಹಿಂದೂ ಸ್ಮಶಾನದಲ್ಲಿ ಸತೀಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

‘ದೀಪಕ್ ರಾವ್ ಅಮರ್ ರಹೆ’ ಎಂದು ಘೋಷಣೆ ಕೂಗುವ ಮೂಲಕ ಕಾರ್ಯಕರ್ತರು ಅಂತಿಮ ವಿದಾಯ ಹೇಳಿದರು.

ಕಾರ್ಯಕರ್ತರು ಭಜನೆ ಮಾಡುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಸ್ಮಶಾನದಲ್ಲಿಯೂ ಕೆಲಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT