<p><strong>ಹಾವೇರಿ</strong>: ‘ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ದೇಶದ ಎಲ್ಲ ಮಹಿಳೆಯರ ಅಕ್ಷರ ತಾಯಿ. ಅವರ ಬಗ್ಗೆ ಎಲ್ಲ ಮಹಿಳೆಯರು ಅವಶ್ಯವಾಗಿ ಅರಿತುಕೊಳ್ಳಬೇಕು’ ಎಂದು ಹೊಸಮಠದ ಚರಮೂರ್ತಿ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.</p>.<p>ಮಾನವ ಬಂಧುತ್ವ ವೇದಿಕೆ ಹಾಗೂ ಹೊಸಮಠದ ಸಹಯೋಗದಲ್ಲಿ ನಗರದ ಎಸ್.ಜೆ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ‘ಸಾವಿತ್ರಿಬಾಯಿ ಫುಲೆಯವರ 187ನೇ ಜನ್ಮದಿನಾಚರಣೆ ಹಾಗೂ ಸಾಧಕಿಯರಿಗೆ ಸನ್ಮಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಕ್ಷರ ದಾನವು ಬಹುದೊಡ್ಡ ಪುಣ್ಯದ ಕೆಲಸ. ಅವಮಾನ, ವಿರೋಧ ಗಳು ಬಂದರೂ ಸಾಕ್ಷರತೆಯ ಕೆಲಸವನ್ನು<br /> ಮಾಡಿದ ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿ ಸಾಧನೆಯನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಮಾತನಾಡಿ, ಭಾರತದಲ್ಲಿ ಶತ ಶತಮಾನಗಳಿಂದ ತುಳಿತಕ್ಕೆ ಒಳಪಟ್ಟ ಸಮುದಾಯಗಳ ಮಹಿಳೆಯರಿಗಾಗಿಯೇ 18 ಶಾಲೆಗಳನ್ನು ತೆರೆದು ಅಕ್ಷರ ಜ್ಞಾನವನ್ನು ಫುಲೆ ದಂಪತಿ ನೀಡಿದರು’ ಎಂದರು.</p>.<p>ಈ ದಂಪತಿ ಶಾಲೆಗಳನ್ನು ನಡೆಸಲು ಬಹಳ ಕಷ್ಟ ಪಟ್ಟಿದ್ದರು. ಫುಲೆ ದಂಪತಿ ಜಡ್ಡುಗಟ್ಟಿದ ಸಮಾಜದಿಂದ ಕಿರುಕುಳ ಅನುಭವಿಸಿದರೂ, ತಮ್ಮ ಜೀವಿತಾವಧಿಯಲ್ಲಿ ತಳ ಸಮುದಾಯ, ಅಸ್ಪೃಶ್ಯರು ಹಾಗೂ ಮಹಿಳೆಯರ ಶಿಕ್ಷಣ ಮತ್ತು ಅಭ್ಯುದಯಕ್ಕಾಗಿ ಶ್ರಮಿಸಿದರು ಎಂದರು.</p>.<p>ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ‘ಅಂದು ಮಹಾರಾಷ್ಟ್ರದ ಪೇಶ್ವೆಗಳು ಗ್ರಾಮಗಳಿಗೆ ಭೇಟಿ ನೀಡುವ ವಿಷಯ ತಿಳಿಯುತ್ತಿದ್ದಂತೆಯೇ ಎಷ್ಟೋ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರಂತೆ. ಅಂತಹ ಕಾಲಘಟ್ಟದಲ್ಲಿ ಸಾವಿತ್ರಾಬಾಯಿ ಫುಲೆಯವರ ಸಾಧನೆ ಎಲ್ಲರಿಗೂ ಮಾದರಿ ಎಂದರು.</p>.<p>ಅವರ ಜೀವನಾಧರಿತ ಚಲನಚಿತ್ರ ನಿರ್ಮಾಣಗೊಳ್ಳುತ್ತಿದೆ. ನಾನು ಏಳು ಹಾಡುಗಳನ್ನು ರಚಿಸಿದ್ದು, ಜಿಲ್ಲೆಯ 30ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ ಎಂದರು.</p>.<p><strong>ಸನ್ಮಾನ:</strong> ನಿವೃತ್ತ ಮುಖ್ಯೋಪಾಧ್ಯಾಯಿನಿ ಶಿವಲೀಲಾ ಮರಗಾಲ, ಮುಖ್ಯ ಶಿಕ್ಷಕಿ ಶೋಭಾ ಜಾಗಟಗೇರಿ ಹಾಗೂ ಸಾಹಿತಿ ಸಂಕಮ್ಮ ಸಂಕಣ್ಣನವರ ಅವರನ್ನು ಸನ್ಮಾನಿಸಲಾಯಿತು. ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗೇಂದ್ರ ಕಡಕೋಳ ಹಾಗೂ ಸನ್ಮಾನಿತರು ಮಾತನಾಡಿದರು.</p>.<p>ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಹಾದಿಮನಿ, ತಾಲ್ಲೂಕು ಘಟಕದ ಸಂಚಾಲಕ ಮಾಲತೇಶ ಅಂಗೂರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಪ್ರಾಧ್ಯಾಪಕ ರಮೇಶ ತೆವರಿ, ಉಪನ್ಯಾಸಕರಾದ ಕೃಷ್ಣಾ ಜವಳಿ ಹಾಗೂ ಶಶಿಕಲಾ ಕಮ್ಮಾರ ಇದ್ದರು.</p>.<p>ಸಾವಿತ್ರಿಬಾಯಿ ಫುಲೆ, ಶರಣೆ ಅಕ್ಕಮಹಾದೇವಿ, ಒನಕೆ ಓಬವ್ವ ಹಾಗೂ ಕಿತ್ತೂರ ರಾಣಿ ಚನ್ನಮ್ಮರಂತಹ ಸಾಧಕಿಯರ ಜೀವನಾಧರಿತ ಧಾರಾವಾಹಿಗಳು ಬರಬೇಕು<br /> <em><strong>–ಬಸವಶಾಂತಲಿಂಗ ಸ್ವಾಮೀಜಿ ಚರಮೂರ್ತಿ, ಹೊಸಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ದೇಶದ ಎಲ್ಲ ಮಹಿಳೆಯರ ಅಕ್ಷರ ತಾಯಿ. ಅವರ ಬಗ್ಗೆ ಎಲ್ಲ ಮಹಿಳೆಯರು ಅವಶ್ಯವಾಗಿ ಅರಿತುಕೊಳ್ಳಬೇಕು’ ಎಂದು ಹೊಸಮಠದ ಚರಮೂರ್ತಿ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.</p>.<p>ಮಾನವ ಬಂಧುತ್ವ ವೇದಿಕೆ ಹಾಗೂ ಹೊಸಮಠದ ಸಹಯೋಗದಲ್ಲಿ ನಗರದ ಎಸ್.ಜೆ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ‘ಸಾವಿತ್ರಿಬಾಯಿ ಫುಲೆಯವರ 187ನೇ ಜನ್ಮದಿನಾಚರಣೆ ಹಾಗೂ ಸಾಧಕಿಯರಿಗೆ ಸನ್ಮಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅಕ್ಷರ ದಾನವು ಬಹುದೊಡ್ಡ ಪುಣ್ಯದ ಕೆಲಸ. ಅವಮಾನ, ವಿರೋಧ ಗಳು ಬಂದರೂ ಸಾಕ್ಷರತೆಯ ಕೆಲಸವನ್ನು<br /> ಮಾಡಿದ ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ದಂಪತಿ ಸಾಧನೆಯನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಾಂತಾ ಹುಲ್ಮನಿ ಮಾತನಾಡಿ, ಭಾರತದಲ್ಲಿ ಶತ ಶತಮಾನಗಳಿಂದ ತುಳಿತಕ್ಕೆ ಒಳಪಟ್ಟ ಸಮುದಾಯಗಳ ಮಹಿಳೆಯರಿಗಾಗಿಯೇ 18 ಶಾಲೆಗಳನ್ನು ತೆರೆದು ಅಕ್ಷರ ಜ್ಞಾನವನ್ನು ಫುಲೆ ದಂಪತಿ ನೀಡಿದರು’ ಎಂದರು.</p>.<p>ಈ ದಂಪತಿ ಶಾಲೆಗಳನ್ನು ನಡೆಸಲು ಬಹಳ ಕಷ್ಟ ಪಟ್ಟಿದ್ದರು. ಫುಲೆ ದಂಪತಿ ಜಡ್ಡುಗಟ್ಟಿದ ಸಮಾಜದಿಂದ ಕಿರುಕುಳ ಅನುಭವಿಸಿದರೂ, ತಮ್ಮ ಜೀವಿತಾವಧಿಯಲ್ಲಿ ತಳ ಸಮುದಾಯ, ಅಸ್ಪೃಶ್ಯರು ಹಾಗೂ ಮಹಿಳೆಯರ ಶಿಕ್ಷಣ ಮತ್ತು ಅಭ್ಯುದಯಕ್ಕಾಗಿ ಶ್ರಮಿಸಿದರು ಎಂದರು.</p>.<p>ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ‘ಅಂದು ಮಹಾರಾಷ್ಟ್ರದ ಪೇಶ್ವೆಗಳು ಗ್ರಾಮಗಳಿಗೆ ಭೇಟಿ ನೀಡುವ ವಿಷಯ ತಿಳಿಯುತ್ತಿದ್ದಂತೆಯೇ ಎಷ್ಟೋ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರಂತೆ. ಅಂತಹ ಕಾಲಘಟ್ಟದಲ್ಲಿ ಸಾವಿತ್ರಾಬಾಯಿ ಫುಲೆಯವರ ಸಾಧನೆ ಎಲ್ಲರಿಗೂ ಮಾದರಿ ಎಂದರು.</p>.<p>ಅವರ ಜೀವನಾಧರಿತ ಚಲನಚಿತ್ರ ನಿರ್ಮಾಣಗೊಳ್ಳುತ್ತಿದೆ. ನಾನು ಏಳು ಹಾಡುಗಳನ್ನು ರಚಿಸಿದ್ದು, ಜಿಲ್ಲೆಯ 30ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ ಎಂದರು.</p>.<p><strong>ಸನ್ಮಾನ:</strong> ನಿವೃತ್ತ ಮುಖ್ಯೋಪಾಧ್ಯಾಯಿನಿ ಶಿವಲೀಲಾ ಮರಗಾಲ, ಮುಖ್ಯ ಶಿಕ್ಷಕಿ ಶೋಭಾ ಜಾಗಟಗೇರಿ ಹಾಗೂ ಸಾಹಿತಿ ಸಂಕಮ್ಮ ಸಂಕಣ್ಣನವರ ಅವರನ್ನು ಸನ್ಮಾನಿಸಲಾಯಿತು. ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗೇಂದ್ರ ಕಡಕೋಳ ಹಾಗೂ ಸನ್ಮಾನಿತರು ಮಾತನಾಡಿದರು.</p>.<p>ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಹಾದಿಮನಿ, ತಾಲ್ಲೂಕು ಘಟಕದ ಸಂಚಾಲಕ ಮಾಲತೇಶ ಅಂಗೂರ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಪ್ರಾಧ್ಯಾಪಕ ರಮೇಶ ತೆವರಿ, ಉಪನ್ಯಾಸಕರಾದ ಕೃಷ್ಣಾ ಜವಳಿ ಹಾಗೂ ಶಶಿಕಲಾ ಕಮ್ಮಾರ ಇದ್ದರು.</p>.<p>ಸಾವಿತ್ರಿಬಾಯಿ ಫುಲೆ, ಶರಣೆ ಅಕ್ಕಮಹಾದೇವಿ, ಒನಕೆ ಓಬವ್ವ ಹಾಗೂ ಕಿತ್ತೂರ ರಾಣಿ ಚನ್ನಮ್ಮರಂತಹ ಸಾಧಕಿಯರ ಜೀವನಾಧರಿತ ಧಾರಾವಾಹಿಗಳು ಬರಬೇಕು<br /> <em><strong>–ಬಸವಶಾಂತಲಿಂಗ ಸ್ವಾಮೀಜಿ ಚರಮೂರ್ತಿ, ಹೊಸಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>