<p><strong>ಮುಧೋಳ:</strong> ’ಖಾಸಗಿ ಸಕ್ಕರೆ ಕಾರ್ಖಾನೆಯೊಂದರ ಆಡಳಿತ ಮಂಡಳಿಯ ಕೆಲವರು ರೈತ ಹೋರಾಟಗಾರ ವಿಶ್ವನಾಥ ಉದಗಟ್ಟಿ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.</p>.<p>ವಿಜಯಪುರ–ಬೆಳಗಾವಿ ರಾಜ್ಯ ಹೆದ್ದಾರಿಯನ್ನು ಒಂದು ತಾಸು ತಡೆದು ಪ್ರತಿಭಟನೆ ನಡೆಸಿದ ರೈತರು ಹಲ್ಲೆಕೋರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ‘ವಿಶ್ವನಾಥ ಉದಗಟ್ಟಿ ಮೇಲೆ ನಡೆದಿರುವ ಹಲ್ಲೆ ಮಾಡಿರುವುದನ್ನು ಹಾಗೂ ಕೊಲೆ ಬೆದರಿಕೆ ಹಾಕಿರುವುದನ್ನು ಸಂಘಟನೆ ವತಿಯಿಂದ ಬಲವಾಗಿ ಖಂಡಿಸುವುದಾಗಿ’ ಹೇಳಿದರು.</p>.<p>‘ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು. ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ತೊಂದರೆಗೀಡಾದವರಿಗೆ ನ್ಯಾಯ ಒದಗಿಸಬೇಕು. ಮುಂದಿನ ದಿನಗಳಲ್ಲಿ ವಿಶ್ವನಾಥಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಕೋಮಾರ ಆಗ್ರಹಿಸಿದರು.</p>.<p>ಸಂಜೆ ನಗರದ ಜಡಗಣ್ಣ ಬಾಲಣ್ಣ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಘಟನೆ ಖಂಡಿಸಿ ಹೆದ್ದಾರಿ ಬಂದ್ ಮಾಡಿದರು.<br /> ರೈತ ಮುಖಂಡರಾದ ಈರಪ್ಪ ಹಂಚಿನಾಳ, ಸಂಗಪ್ಪ ನಾಗರಡ್ಡಿ ಅವರು ಘಟನೆ ಖಂಡಿಸಿ ಮಾತನಾಡಿದರು. ಹಣಮಂತ ನಬಾಬ, ಸುಭಾಷ್ ಶಿರಬೂರ ಮುಂತಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.</p>.<p>ರಸ್ತೆ ಬಂದ್ ಆದ ಕಾರಣ ಸವದತ್ತಿ ಯಲ್ಲಮ್ಮನ ಗುಡ್ಡದ ಭಕ್ತರು, ಬಾದಾಮಿ ಬನಶಂಕರಿ ದೇವಿ ಭಕ್ತರು ಹಾಗೂ ಸಾರ್ವಜನಿಕರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ’ಖಾಸಗಿ ಸಕ್ಕರೆ ಕಾರ್ಖಾನೆಯೊಂದರ ಆಡಳಿತ ಮಂಡಳಿಯ ಕೆಲವರು ರೈತ ಹೋರಾಟಗಾರ ವಿಶ್ವನಾಥ ಉದಗಟ್ಟಿ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.</p>.<p>ವಿಜಯಪುರ–ಬೆಳಗಾವಿ ರಾಜ್ಯ ಹೆದ್ದಾರಿಯನ್ನು ಒಂದು ತಾಸು ತಡೆದು ಪ್ರತಿಭಟನೆ ನಡೆಸಿದ ರೈತರು ಹಲ್ಲೆಕೋರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ‘ವಿಶ್ವನಾಥ ಉದಗಟ್ಟಿ ಮೇಲೆ ನಡೆದಿರುವ ಹಲ್ಲೆ ಮಾಡಿರುವುದನ್ನು ಹಾಗೂ ಕೊಲೆ ಬೆದರಿಕೆ ಹಾಕಿರುವುದನ್ನು ಸಂಘಟನೆ ವತಿಯಿಂದ ಬಲವಾಗಿ ಖಂಡಿಸುವುದಾಗಿ’ ಹೇಳಿದರು.</p>.<p>‘ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು. ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ತೊಂದರೆಗೀಡಾದವರಿಗೆ ನ್ಯಾಯ ಒದಗಿಸಬೇಕು. ಮುಂದಿನ ದಿನಗಳಲ್ಲಿ ವಿಶ್ವನಾಥಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಕೋಮಾರ ಆಗ್ರಹಿಸಿದರು.</p>.<p>ಸಂಜೆ ನಗರದ ಜಡಗಣ್ಣ ಬಾಲಣ್ಣ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಘಟನೆ ಖಂಡಿಸಿ ಹೆದ್ದಾರಿ ಬಂದ್ ಮಾಡಿದರು.<br /> ರೈತ ಮುಖಂಡರಾದ ಈರಪ್ಪ ಹಂಚಿನಾಳ, ಸಂಗಪ್ಪ ನಾಗರಡ್ಡಿ ಅವರು ಘಟನೆ ಖಂಡಿಸಿ ಮಾತನಾಡಿದರು. ಹಣಮಂತ ನಬಾಬ, ಸುಭಾಷ್ ಶಿರಬೂರ ಮುಂತಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.</p>.<p>ರಸ್ತೆ ಬಂದ್ ಆದ ಕಾರಣ ಸವದತ್ತಿ ಯಲ್ಲಮ್ಮನ ಗುಡ್ಡದ ಭಕ್ತರು, ಬಾದಾಮಿ ಬನಶಂಕರಿ ದೇವಿ ಭಕ್ತರು ಹಾಗೂ ಸಾರ್ವಜನಿಕರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>