ಪರಿಣಾಮವಾಗಿ ವಿದ್ಯಾರ್ಥಿಗಳು ತೀವ್ರ ನಿರಾಸೆಗೊಂಡರು. ವಿಷಯ ತಿಳಿದು ಪಾಲಕರು ಶಾಲೆಗೆ ಬಂದರು. ಶಿಕ್ಷಕರ ನಡುವೆ ಹೊಂದಾಣಿಕೆ ಇಲ್ಲದ್ದಕ್ಕೆ ಪ್ರವಾಸ ರದ್ದಾಗಿರುವುದು ತಿಳಿದು ತೀವ್ರ ಆಕ್ರೋಶಗೊಂಡರು. ಜತೆಗೆ ಮುಖ್ಯ ಶಿಕ್ಷಕರು, ಶಿಕ್ಷಕರು ಸಮಯಕ್ಕೆ ಸರಿಯಾಗಿ ಹಾಗೂ ನಿಯಮಿತವಾಗಿ ಶಾಲೆಗೆ ಬರುವುದಿಲ್ಲ. ಸರಿಯಾಗಿ ಕಲಿಸುವುದಿಲ್ಲ, ಮಕ್ಕಳಿಗೆ ಓದಲು, ಬರೆಯಲು ಮತ್ತು ಲೆಕ್ಕ ಮಾಡಲು ಬರುವುದಿಲ್ಲ ಪಾಲಕರೊಂದಿಗೆ ಸೌಜನ್ಯದಿಂದ ವರ್ತಿಸುವುದಿಲ್ಲ, ಕೆಲವು ಶಿಕ್ಷಕರು ರಾಜಕೀಯ ವ್ಯಕ್ತಿಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಮೊದಲೇ ಅಸಮಧಾನ ಹೊಂದಿದ್ದ ಗ್ರಾಮಸ್ಥರು, ಈ ಸಂದರ್ಭವನ್ನು ಬಳಸಿಕೊಂಡು ಶಾಲಾ ವ್ಯವಸ್ಥೆಯನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು.