<p><strong>ಮಹಾಲಿಂಗಪುರ:</strong> ಪ್ರಸಕ್ತ ಸಾಲಿನ ಕಬ್ಬಿನ ದರವನ್ನು ಘೋಷಿಸಬೇಕೆಂದು ರೈತ ಸಂಘದ ಸದಸ್ಯರು ಮಂಗಳವಾರ ಸಮೀಪದ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>ರೈತ ಸಂಘದ ರಾಜ್ಯ ಸಂಚಾಲಕ ಗಂಗಾಧರ ಮೇಟಿ ಮಾತನಾಡಿ, ಕಾರ್ಖಾನೆ ಪ್ರಾರಂಭವಾಗಿ ಎರಡು ತಿಂಗಳು ಕಳೆಯಿತು. ಇಂದಿಗೂ ಪ್ರಸಕ್ತ ಸಾಲಿನ ದರವನ್ನು ಘೋಷಿಸಿಲ್ಲ.</p>.<p>ನೆರೆಯ ಬೆಳಗಾವಿ ಜಿಲ್ಲೆಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯವರು ಪ್ರಸಕ್ತ ಸಾಲಿನಲ್ಲಿ ₹ 3,150 ದರವನ್ನು ಘೋಷಿಸಿದ್ದಾರೆ. ಅದೇ ದರವನ್ನು ನಮ್ಮ ಜಿಲ್ಲೆಯ ಕಾರ್ಖಾನೆಗಳು ನೀಡಬೇಕು ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ಮುಖಂಡ ಚಿನ್ನಪ್ಪ ಪೂಜೇರಿ ಮಾತನಾಡಿ, ನಾಲ್ಕು ದಿನಗಳಲ್ಲಿ ಕಾರ್ಖಾನೆಗಳು ದರವನ್ನು ಘೋಷಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಭಾಲಚಂದ್ರ ಬಕ್ಷಿ ಮಾತನಾಡಿ, ಜ.13ರವರೆಗೆ ಕಾಲಾವಕಾಶ ನೀಡಿ. ಅಷ್ಟರಲ್ಲಿ ಸೂಕ್ತ ದರ ಘೋಷಿಸುವುದಾಗಿ ಭರವಸೆ ನೀಡಿದರು.</p>.<p>ಮಹಾಲಿಂಗಪುರ ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.</p>.<p>ಬಂದು ಪಕಾಲಿ, ಶ್ರೀಶೈಲ ಅಂಗಡಿ, ಮಲ್ಲಪ್ಪ ಅಂಗಡಿ, ಖಲೀಲ ಮುಲ್ಲಾ, ಕರೆಪ್ಪ ಮೇಟಿ, ಭೀಮಸಿ ಗಡದಿ, ದಾನಯ್ಯ ಮಠಪತಿ, ಸತ್ಯಪ್ಪ ಮಲ್ಲಾಪೂರ, ಗುರುನಾಥ ಹುಕ್ಕೇರಿ, ಈರಣ್ಣ ಸಸಾಲಟ್ಟಿ, ಅರ್ಜುನ ಬಂಡಿವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ಪ್ರಸಕ್ತ ಸಾಲಿನ ಕಬ್ಬಿನ ದರವನ್ನು ಘೋಷಿಸಬೇಕೆಂದು ರೈತ ಸಂಘದ ಸದಸ್ಯರು ಮಂಗಳವಾರ ಸಮೀಪದ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.</p>.<p>ರೈತ ಸಂಘದ ರಾಜ್ಯ ಸಂಚಾಲಕ ಗಂಗಾಧರ ಮೇಟಿ ಮಾತನಾಡಿ, ಕಾರ್ಖಾನೆ ಪ್ರಾರಂಭವಾಗಿ ಎರಡು ತಿಂಗಳು ಕಳೆಯಿತು. ಇಂದಿಗೂ ಪ್ರಸಕ್ತ ಸಾಲಿನ ದರವನ್ನು ಘೋಷಿಸಿಲ್ಲ.</p>.<p>ನೆರೆಯ ಬೆಳಗಾವಿ ಜಿಲ್ಲೆಯ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯವರು ಪ್ರಸಕ್ತ ಸಾಲಿನಲ್ಲಿ ₹ 3,150 ದರವನ್ನು ಘೋಷಿಸಿದ್ದಾರೆ. ಅದೇ ದರವನ್ನು ನಮ್ಮ ಜಿಲ್ಲೆಯ ಕಾರ್ಖಾನೆಗಳು ನೀಡಬೇಕು ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ಮುಖಂಡ ಚಿನ್ನಪ್ಪ ಪೂಜೇರಿ ಮಾತನಾಡಿ, ನಾಲ್ಕು ದಿನಗಳಲ್ಲಿ ಕಾರ್ಖಾನೆಗಳು ದರವನ್ನು ಘೋಷಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಭಾಲಚಂದ್ರ ಬಕ್ಷಿ ಮಾತನಾಡಿ, ಜ.13ರವರೆಗೆ ಕಾಲಾವಕಾಶ ನೀಡಿ. ಅಷ್ಟರಲ್ಲಿ ಸೂಕ್ತ ದರ ಘೋಷಿಸುವುದಾಗಿ ಭರವಸೆ ನೀಡಿದರು.</p>.<p>ಮಹಾಲಿಂಗಪುರ ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು.</p>.<p>ಬಂದು ಪಕಾಲಿ, ಶ್ರೀಶೈಲ ಅಂಗಡಿ, ಮಲ್ಲಪ್ಪ ಅಂಗಡಿ, ಖಲೀಲ ಮುಲ್ಲಾ, ಕರೆಪ್ಪ ಮೇಟಿ, ಭೀಮಸಿ ಗಡದಿ, ದಾನಯ್ಯ ಮಠಪತಿ, ಸತ್ಯಪ್ಪ ಮಲ್ಲಾಪೂರ, ಗುರುನಾಥ ಹುಕ್ಕೇರಿ, ಈರಣ್ಣ ಸಸಾಲಟ್ಟಿ, ಅರ್ಜುನ ಬಂಡಿವಡ್ಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>