<p><strong>ವಿಜಯಪುರ : </strong>ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಸಮ್ಮತವಾದ ವೈಜ್ಞಾನಿಕ ಬೆಲೆಯನ್ನು ನಿಗದಿ ಪಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು ಎಂದು ಜೆಡಿಎಸ್ ನಾಯಕ ನಿಸರ್ಗ ಡಾ.ಎಲ್.ಎನ್.ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿ ನವದೆಹಲಿಯ ಭಾರತೀಯ ಕೃಷಿಕ ಸಮಾಜದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>1,500 ಅಡಿ ಕೊಳವೆಬಾವಿಗಳ ಮೂಲಕ ನೀರು ತೆಗೆದು ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ವೈಜ್ಞಾನಿಕವಾದ ಬೆಲೆಗಳು ಸಿಗದೆ, ಅವರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಬ್ಯಾಂಕುಗಳಿಂದ ಕೃಷಿ ಚಟುವಟಿಕೆಗಳಿಗಾಗಿ ಪಡೆದಿರುವ ಸಾಲಗಳನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಸಾಲಗಾರರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಬಯಲು ಸೀಮೆ ಭಾಗದಲ್ಲಿನ ರೈತರು ನೀರಿಗಾಗಿ ಸತತ ನಾಲ್ಕು ದಶಕಗಳಿಂದ ಹೋರಾಟ ಮಾಡುತ್ತಿದ್ದರು. ಕೇವಲ ಯೋಜನೆಗಳ ಹೆಸರು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ಸರ್ಕಾರಗಳು ಈ ಭಾಗದಲ್ಲಿನ ರೈತರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸುತ್ತಿವೆ ಎಂದು ಆರೋಪಿಸಿದರು.</p>.<p>ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ, ರಾಷ್ಟ್ರೀಯ ಪಕ್ಷಗಳಿಂದ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.</p>.<p>ಭಾರತೀಯ ಕೃಷಿಕ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಮುನಿವೆಂಕಟರಮಣಪ್ಪ ಮಾತನಾಡಿ, ತೀವ್ರ ಬರಗಾಲ ಮತ್ತು ಸಂಕಷ್ಟದ ನಡುವೆಯು ಲಭ್ಯವಾಗುತ್ತಿರುವ ಅಲ್ಪಪ್ರಮಾಣದ ನೀರನ್ನು ಬಳಕೆ ಮಾಡಿಕೊಂಡು ಬೆಳೆಯುತ್ತಿರುವ ಬೆಳೆಗಳಿಗೆ ಸೂಕ್ತವಾದ ಬೆಲೆಗಳನ್ನು ಒದಗಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.</p>.<p>ಮಳೆಯ ಕೊರತೆಯಿಂದಾಗಿ ಕಳೆದ ವರ್ಷ ಬಿತ್ತನೆ ಮಾಡಿದ್ದ ಬೆಳೆ ಮೊಳಕೆಯೊಡೆಯದೆ ನಾಶವಾಗಿತ್ತು. ಹಲವಾರು ರೈತರಿಗೆ ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದರು.</p>.<p>ರೈತರಿಗೆ ವಿತರಣೆ ಮಾಡಿರುವ ಬಿತ್ತನೆ ಬೀಜಗಳು ಕಳಪೆಯಾಗಿರುವ ಕಾರಣ ಹಲವೆಡೆ ರಾಗಿ ಬೆಳೆಗಳು ಸರಿಯಾಗಿ ಆಗದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಬೆಳೆಗಳಿಗೆ ವಿಮೆ ಮಾಡಿಸುವಂತೆ ಹೇಳಿರುವ ಸರ್ಕಾರ, ನಷ್ಟವಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಆದ್ದರಿಂದ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಭಾರತೀಯ ಕೃಷಿಕ ಸಮಾಜದ ವತಿಯಿಂದ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ ಅವರನ್ನು ಹಸಿರು ಶಾಲು ಹೊದಿಸಿ ಸನ್ಮಾನಿಸಿದರು.</p>.<p>ಡಾ.ವಿ.ನಾ.ರಮೇಶ್, ಜೆ.ಆರ್.ಮುನಿವೀರಣ್ಣ, ಸದಾಖತ್, ಮಂಡಿಬೆಲೆ ವಿಜಯಕುಮಾರ್, ಚಂದ್ರಶೇಖರ ಹಡಪದ್, ಮಹೇಶ್ ಕುಮಾರ್, ಬಿಜ್ಜವಾರ ಆನಂದ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ : </strong>ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಸಮ್ಮತವಾದ ವೈಜ್ಞಾನಿಕ ಬೆಲೆಯನ್ನು ನಿಗದಿ ಪಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು ಎಂದು ಜೆಡಿಎಸ್ ನಾಯಕ ನಿಸರ್ಗ ಡಾ.ಎಲ್.ಎನ್.ನಾರಾಯಣಸ್ವಾಮಿ ಹೇಳಿದರು.</p>.<p>ಇಲ್ಲಿ ನವದೆಹಲಿಯ ಭಾರತೀಯ ಕೃಷಿಕ ಸಮಾಜದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>1,500 ಅಡಿ ಕೊಳವೆಬಾವಿಗಳ ಮೂಲಕ ನೀರು ತೆಗೆದು ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ವೈಜ್ಞಾನಿಕವಾದ ಬೆಲೆಗಳು ಸಿಗದೆ, ಅವರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಬ್ಯಾಂಕುಗಳಿಂದ ಕೃಷಿ ಚಟುವಟಿಕೆಗಳಿಗಾಗಿ ಪಡೆದಿರುವ ಸಾಲಗಳನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಸಾಲಗಾರರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಬಯಲು ಸೀಮೆ ಭಾಗದಲ್ಲಿನ ರೈತರು ನೀರಿಗಾಗಿ ಸತತ ನಾಲ್ಕು ದಶಕಗಳಿಂದ ಹೋರಾಟ ಮಾಡುತ್ತಿದ್ದರು. ಕೇವಲ ಯೋಜನೆಗಳ ಹೆಸರು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ಸರ್ಕಾರಗಳು ಈ ಭಾಗದಲ್ಲಿನ ರೈತರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸುತ್ತಿವೆ ಎಂದು ಆರೋಪಿಸಿದರು.</p>.<p>ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ, ರಾಷ್ಟ್ರೀಯ ಪಕ್ಷಗಳಿಂದ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.</p>.<p>ಭಾರತೀಯ ಕೃಷಿಕ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಮುನಿವೆಂಕಟರಮಣಪ್ಪ ಮಾತನಾಡಿ, ತೀವ್ರ ಬರಗಾಲ ಮತ್ತು ಸಂಕಷ್ಟದ ನಡುವೆಯು ಲಭ್ಯವಾಗುತ್ತಿರುವ ಅಲ್ಪಪ್ರಮಾಣದ ನೀರನ್ನು ಬಳಕೆ ಮಾಡಿಕೊಂಡು ಬೆಳೆಯುತ್ತಿರುವ ಬೆಳೆಗಳಿಗೆ ಸೂಕ್ತವಾದ ಬೆಲೆಗಳನ್ನು ಒದಗಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.</p>.<p>ಮಳೆಯ ಕೊರತೆಯಿಂದಾಗಿ ಕಳೆದ ವರ್ಷ ಬಿತ್ತನೆ ಮಾಡಿದ್ದ ಬೆಳೆ ಮೊಳಕೆಯೊಡೆಯದೆ ನಾಶವಾಗಿತ್ತು. ಹಲವಾರು ರೈತರಿಗೆ ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದರು.</p>.<p>ರೈತರಿಗೆ ವಿತರಣೆ ಮಾಡಿರುವ ಬಿತ್ತನೆ ಬೀಜಗಳು ಕಳಪೆಯಾಗಿರುವ ಕಾರಣ ಹಲವೆಡೆ ರಾಗಿ ಬೆಳೆಗಳು ಸರಿಯಾಗಿ ಆಗದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಬೆಳೆಗಳಿಗೆ ವಿಮೆ ಮಾಡಿಸುವಂತೆ ಹೇಳಿರುವ ಸರ್ಕಾರ, ನಷ್ಟವಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಆದ್ದರಿಂದ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಭಾರತೀಯ ಕೃಷಿಕ ಸಮಾಜದ ವತಿಯಿಂದ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ ಅವರನ್ನು ಹಸಿರು ಶಾಲು ಹೊದಿಸಿ ಸನ್ಮಾನಿಸಿದರು.</p>.<p>ಡಾ.ವಿ.ನಾ.ರಮೇಶ್, ಜೆ.ಆರ್.ಮುನಿವೀರಣ್ಣ, ಸದಾಖತ್, ಮಂಡಿಬೆಲೆ ವಿಜಯಕುಮಾರ್, ಚಂದ್ರಶೇಖರ ಹಡಪದ್, ಮಹೇಶ್ ಕುಮಾರ್, ಬಿಜ್ಜವಾರ ಆನಂದ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>