<p><strong>ದೊಡ್ಡಬಳ್ಳಾಪುರ:</strong> ನಿರ್ದಿಷ್ಟ ಮಾಹಿತಿ ಕೋರಿ ಯಾವ ವ್ಯಕ್ತಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿರುವವರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳಿಗೆ ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಕೆ.ಎಂ.ಚಂದ್ರೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಭ್ರಷ್ಟಾಚಾರ ನಿಗ್ರಹಿಸಿ ಉತ್ತಮ ಆಡಳಿತ ನೀಡುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಪ್ರಭಾವಶಾಲಿ. ಅಧಿಕಾರಿಗಳು ಈ ಕಾಯ್ದೆಯ ಸ್ವರೂಪದ ಬಗ್ಗೆ ಮಾಹಿತಿ ಅರಿತುಕೊಂಡು ಅರ್ಜಿದಾರರು ಕೋರಿರುವ ಮಾಹಿತಿ ಸಕಾಲದಲ್ಲಿ ನೀಡಬೇಕು. ಅಧಿಕಾರಿಗಳು ಅರ್ಜಿಗಳನ್ನು ಮೊದಲು ಸರಿಯಾಗಿ ಓದಿ, ಮಾಹಿತಿ ಯಾವುದನ್ನು ನೀಡಬೇಕು ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು. ಅರ್ಜಿದಾರರು ತುಂಬಾ ವಿಸ್ತಾರ ವಾದ ವಿವರ ಕೇಳುವಂತಿಲ್ಲ ಎಂದರು.</p>.<p>ನಿರ್ದಿಷ್ಟ ವಿಚಾರಕ್ಕೆ ಸಂಬಂಧಿಸಿರಬೇಕು. ವೈಯಕ್ತಿಕ ಅಥವಾ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಚಾರಗಳನ್ನು ಕೇಳುವಂತಿಲ್ಲ ಎಂದು ತಿಳಿಸಿದರು.</p>.<p>ನಗರಸಭೆಯಲ್ಲಿ ಮಾಹಿತಿ ನೀಡದೇ ಬಾಕಿ ಇದ್ದ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು. ಅವಧಿ ಮೀರಿರುವ ಅರ್ಜಿಗಳ ಮಾಹಿತಿಯನ್ನು ಅರ್ಜಿದಾರರಿಗೆ ಉಚಿತವಾಗಿ ನೀಡುವಂತೆ ಕಡತದ ಮೇಲೆ ಷರಾ ಬರೆದರು. ಯಾವುದೇ ಕಾರಣಕ್ಕೂ ಮಾಹಿತಿ ನೀಡುವುದು ವಿಳಂಬವಾಗದಂತೆ ಸೂಚಿಸಿದರು.</p>.<p>ಸರ್ಕಾರದ ಕೆಲಸಗಳಲ್ಲಿ ಪಾರದರ್ಶಕತೆ ಇರಬೇಕು ನಿಜ. ಆದರೆ ಅನವಶ್ಯಕವಾಗಿ ಮಾಹಿತಿ ಕೇಳಿ, ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ತೊಂದರೆ ಮಾಡುವುದು ಸರಿಯಲ್ಲ ಎಂದರು.</p>.<p>ಈ ದಿಸೆಯಲ್ಲಿ ಮಾಹಿತಿ ಕೇಳುವವರು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮಾಹಿತಿ ಹಕ್ಕಿನಡಿ ಹೆಚ್ಚು ಅರ್ಜಿ ಸಲ್ಲಿಸಿದ್ದವರಿಗೆ ಕಿವಿಮಾತು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೀಶ್, ಉಪವಿಭಾಗಾಧಿಕಾರಿ ಎನ್.ಮಹೇಶ್ ಬಾಬು, ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಶೇಖ್ ಫಿರೋಜ್ಹೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ನಿರ್ದಿಷ್ಟ ಮಾಹಿತಿ ಕೋರಿ ಯಾವ ವ್ಯಕ್ತಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿರುವವರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳಿಗೆ ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಕೆ.ಎಂ.ಚಂದ್ರೇಗೌಡ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಭ್ರಷ್ಟಾಚಾರ ನಿಗ್ರಹಿಸಿ ಉತ್ತಮ ಆಡಳಿತ ನೀಡುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಪ್ರಭಾವಶಾಲಿ. ಅಧಿಕಾರಿಗಳು ಈ ಕಾಯ್ದೆಯ ಸ್ವರೂಪದ ಬಗ್ಗೆ ಮಾಹಿತಿ ಅರಿತುಕೊಂಡು ಅರ್ಜಿದಾರರು ಕೋರಿರುವ ಮಾಹಿತಿ ಸಕಾಲದಲ್ಲಿ ನೀಡಬೇಕು. ಅಧಿಕಾರಿಗಳು ಅರ್ಜಿಗಳನ್ನು ಮೊದಲು ಸರಿಯಾಗಿ ಓದಿ, ಮಾಹಿತಿ ಯಾವುದನ್ನು ನೀಡಬೇಕು ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು. ಅರ್ಜಿದಾರರು ತುಂಬಾ ವಿಸ್ತಾರ ವಾದ ವಿವರ ಕೇಳುವಂತಿಲ್ಲ ಎಂದರು.</p>.<p>ನಿರ್ದಿಷ್ಟ ವಿಚಾರಕ್ಕೆ ಸಂಬಂಧಿಸಿರಬೇಕು. ವೈಯಕ್ತಿಕ ಅಥವಾ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಚಾರಗಳನ್ನು ಕೇಳುವಂತಿಲ್ಲ ಎಂದು ತಿಳಿಸಿದರು.</p>.<p>ನಗರಸಭೆಯಲ್ಲಿ ಮಾಹಿತಿ ನೀಡದೇ ಬಾಕಿ ಇದ್ದ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು. ಅವಧಿ ಮೀರಿರುವ ಅರ್ಜಿಗಳ ಮಾಹಿತಿಯನ್ನು ಅರ್ಜಿದಾರರಿಗೆ ಉಚಿತವಾಗಿ ನೀಡುವಂತೆ ಕಡತದ ಮೇಲೆ ಷರಾ ಬರೆದರು. ಯಾವುದೇ ಕಾರಣಕ್ಕೂ ಮಾಹಿತಿ ನೀಡುವುದು ವಿಳಂಬವಾಗದಂತೆ ಸೂಚಿಸಿದರು.</p>.<p>ಸರ್ಕಾರದ ಕೆಲಸಗಳಲ್ಲಿ ಪಾರದರ್ಶಕತೆ ಇರಬೇಕು ನಿಜ. ಆದರೆ ಅನವಶ್ಯಕವಾಗಿ ಮಾಹಿತಿ ಕೇಳಿ, ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ತೊಂದರೆ ಮಾಡುವುದು ಸರಿಯಲ್ಲ ಎಂದರು.</p>.<p>ಈ ದಿಸೆಯಲ್ಲಿ ಮಾಹಿತಿ ಕೇಳುವವರು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಮಾಹಿತಿ ಹಕ್ಕಿನಡಿ ಹೆಚ್ಚು ಅರ್ಜಿ ಸಲ್ಲಿಸಿದ್ದವರಿಗೆ ಕಿವಿಮಾತು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೀಶ್, ಉಪವಿಭಾಗಾಧಿಕಾರಿ ಎನ್.ಮಹೇಶ್ ಬಾಬು, ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಶೇಖ್ ಫಿರೋಜ್ಹೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>