<p>ವಿಜಯಪುರ: ಮನುವಾದಿಗಳ ವಿರೋಧದ ನಡುವೆಯೂ ಸಾವಿತ್ರಿಬಾ ಫುಲೆ ದೇಶದಲ್ಲಿ ಮೊಟ್ಟ ಮೊದಲು ಪ್ರತ್ಯೇಕ ಹೆಣ್ಣುಮಕ್ಕಳ ಶಾಲೆ ಆರಂಭಿಸಿ ದಾರಿದೀಪವಾಗಿದ್ದಾರೆ ಎಂದು ರಾಯಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಡಾ.ವಿ.ನಾ.ರಮೇಶ್ ಹೇಳಿದರು.</p>.<p>ಇಲ್ಲಿನ ರಾಯಲ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಾವಿತ್ರಿಬಾ ಫುಲೆ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಮನುವಾದಿಗಳು ಮಹಿಳೆಯರಿಗೆ, ಶೋಷಿತರಿಗೆ ನಿಷೇಧಿಸಿದ ಶಿಕ್ಷಣ ಹಕ್ಕನ್ನು ಸಾವಿತ್ರಿಬಾ ಫುಲೆ ಅವರು ಪುಣೆಯಲ್ಲಿ ಪ್ರತ್ಯೇಕ ಹೆಣ್ಣು ಮಕ್ಕಳ ಶಾಲೆಯನ್ನು ಆರಂಭಿಸಿ, ವಿದ್ಯೆ ಕಲಿಯುವಂತೆ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>‘ಅಂದು ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಹೇಳಿಕೊಡದೆ ಹೋಗಿದ್ದರೆ ನಮ್ಮ ಸ್ಥಿತಿ ಯಾವ ಮಟ್ಟದಲ್ಲಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ’ ಎಂದರು.</p>.<p>ಮುಖ್ಯಶಿಕ್ಷಕಿ ಚಂದ್ರಮುಖಿ ರಮೇಶ್ ಮಾತನಾಡಿ ಸಾವಿತ್ರಿಬಾ ಫುಲೆ ಭಾರತದ ಪ್ರಥಮ ಶಿಕ್ಷಕಿ ಮಾತ್ರವಲ್ಲ. ವಿಶ್ವದ ಮಾತೆ ಆಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಮಹಿಳೆಯರ ಉದ್ಧಾರಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮಹಿಳೆ ವಿರುದ್ಧ ಇರುವ ಅನಿಷ್ಟ ಪದ್ಧತಿ ವಿರುದ್ಧ ಹೋರಾಟ ನಡೆಸಿದರು ಎಂದರು.</p>.<p>ಜಾತಿ, ಧರ್ಮ, ವರ್ಗ ಭೇದ ಮಾಡದೆ ಎಲ್ಲರಿಗೂ ಅಕ್ಷರದೂಟ ಉಣಬಡಿಸಿದ ಅವರ ಜನ್ಮದಿನವನ್ನು ಶಿಕ್ಷಕಿಯರ ದಿನಾಚರಣೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಂಯೋಜಕಿ ಎಚ್.ಭಾರತಿ ಮಾತನಾಡಿ, ಬಾಲ್ಯ ವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯಗಳಂತಹ ಪಿಡುಗು ತೊಲಗಿಸಲು ಮೊದಲು ಮಹಿಳೆ ಶಿಕ್ಷಣವಂತಳಾಗಬೇಕು ಎಂದರು.</p>.<p>‘ಅವರ ಜೀವನ ಸಾಧನೆಗಳ ಬಗ್ಗೆ ತಿಳಿದುಕೊಂಡು ಅವರಲ್ಲಿನ ಒಳ್ಳೆಯ ಗುಣ, ತತ್ವ ಆದರ್ಶಗಳನ್ನು ನಾವೂ ಮೈಗೂಡಿಸಿಕೊಳ್ಳುವ ಅವಶ್ಯಕತೆ ಇದೆ. ಜಾತಿ, ಮತ, ಧರ್ಮ, ಬಡವ, ಶ್ರೀಮಂತ ಎನ್ನುವ ತಾರತಮ್ಯ ಇಲ್ಲದೆ ಎಲ್ಲರೂ ಈ ನಾಡಿನ ಶ್ರೇಯಸ್ಸಿಗೆ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಸಾವಿತ್ರಿಬಾ ಫುಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಶಿಕ್ಷಕಿ ವಿಜಯಜ್ಯೋತಿ. ಗಾಯಿತ್ರಿ, ಸಹಾಯಕಿ ನೇತ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಮನುವಾದಿಗಳ ವಿರೋಧದ ನಡುವೆಯೂ ಸಾವಿತ್ರಿಬಾ ಫುಲೆ ದೇಶದಲ್ಲಿ ಮೊಟ್ಟ ಮೊದಲು ಪ್ರತ್ಯೇಕ ಹೆಣ್ಣುಮಕ್ಕಳ ಶಾಲೆ ಆರಂಭಿಸಿ ದಾರಿದೀಪವಾಗಿದ್ದಾರೆ ಎಂದು ರಾಯಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಡಾ.ವಿ.ನಾ.ರಮೇಶ್ ಹೇಳಿದರು.</p>.<p>ಇಲ್ಲಿನ ರಾಯಲ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸಾವಿತ್ರಿಬಾ ಫುಲೆ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಮನುವಾದಿಗಳು ಮಹಿಳೆಯರಿಗೆ, ಶೋಷಿತರಿಗೆ ನಿಷೇಧಿಸಿದ ಶಿಕ್ಷಣ ಹಕ್ಕನ್ನು ಸಾವಿತ್ರಿಬಾ ಫುಲೆ ಅವರು ಪುಣೆಯಲ್ಲಿ ಪ್ರತ್ಯೇಕ ಹೆಣ್ಣು ಮಕ್ಕಳ ಶಾಲೆಯನ್ನು ಆರಂಭಿಸಿ, ವಿದ್ಯೆ ಕಲಿಯುವಂತೆ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>‘ಅಂದು ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಹೇಳಿಕೊಡದೆ ಹೋಗಿದ್ದರೆ ನಮ್ಮ ಸ್ಥಿತಿ ಯಾವ ಮಟ್ಟದಲ್ಲಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ’ ಎಂದರು.</p>.<p>ಮುಖ್ಯಶಿಕ್ಷಕಿ ಚಂದ್ರಮುಖಿ ರಮೇಶ್ ಮಾತನಾಡಿ ಸಾವಿತ್ರಿಬಾ ಫುಲೆ ಭಾರತದ ಪ್ರಥಮ ಶಿಕ್ಷಕಿ ಮಾತ್ರವಲ್ಲ. ವಿಶ್ವದ ಮಾತೆ ಆಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಮಹಿಳೆಯರ ಉದ್ಧಾರಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮಹಿಳೆ ವಿರುದ್ಧ ಇರುವ ಅನಿಷ್ಟ ಪದ್ಧತಿ ವಿರುದ್ಧ ಹೋರಾಟ ನಡೆಸಿದರು ಎಂದರು.</p>.<p>ಜಾತಿ, ಧರ್ಮ, ವರ್ಗ ಭೇದ ಮಾಡದೆ ಎಲ್ಲರಿಗೂ ಅಕ್ಷರದೂಟ ಉಣಬಡಿಸಿದ ಅವರ ಜನ್ಮದಿನವನ್ನು ಶಿಕ್ಷಕಿಯರ ದಿನಾಚರಣೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಂಯೋಜಕಿ ಎಚ್.ಭಾರತಿ ಮಾತನಾಡಿ, ಬಾಲ್ಯ ವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯಗಳಂತಹ ಪಿಡುಗು ತೊಲಗಿಸಲು ಮೊದಲು ಮಹಿಳೆ ಶಿಕ್ಷಣವಂತಳಾಗಬೇಕು ಎಂದರು.</p>.<p>‘ಅವರ ಜೀವನ ಸಾಧನೆಗಳ ಬಗ್ಗೆ ತಿಳಿದುಕೊಂಡು ಅವರಲ್ಲಿನ ಒಳ್ಳೆಯ ಗುಣ, ತತ್ವ ಆದರ್ಶಗಳನ್ನು ನಾವೂ ಮೈಗೂಡಿಸಿಕೊಳ್ಳುವ ಅವಶ್ಯಕತೆ ಇದೆ. ಜಾತಿ, ಮತ, ಧರ್ಮ, ಬಡವ, ಶ್ರೀಮಂತ ಎನ್ನುವ ತಾರತಮ್ಯ ಇಲ್ಲದೆ ಎಲ್ಲರೂ ಈ ನಾಡಿನ ಶ್ರೇಯಸ್ಸಿಗೆ ಶ್ರಮಿಸಬೇಕು’ ಎಂದು ಹೇಳಿದರು.</p>.<p>ಸಾವಿತ್ರಿಬಾ ಫುಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಶಿಕ್ಷಕಿ ವಿಜಯಜ್ಯೋತಿ. ಗಾಯಿತ್ರಿ, ಸಹಾಯಕಿ ನೇತ್ರಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>