ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಲವಾರು ಬಂಡಿ ಏತ ನೀರಾವರಿಗೆ 2013ರಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ₹ 20 ಕೋಟಿ ಅನುದಾನ ಬಂದಿದೆ ಎಂದು ಸುಳ್ಳು ಹೇಳಿ ವಿವಿಧ ಮಠಾಧೀಶರನ್ನು ಆಹ್ವಾನಿಸಿ ಭೂಮಿ ಪೂಜೆ ಮಾಡಿಸಿದ್ದರು. ಅಂದು ಚಿಲವಾರು ಬಂಡಿ ಯೋಜನೆಯ ಟೆಂಡರ್ ಯಾವ ಗುತ್ತಿಗೆದಾರರಿಗೆ ನೀಡಲಾಗಿತ್ತು ಎನ್ನುವುದನ್ನು ಮಾಜಿ ಶಾಸಕರು ಬಹಿರಂಗ ಪಡಿಸಿದರೆ ₹10 ಲಕ್ಷ ಬಹುಮಾನ ನೀಡಲಾಗುವುದು. ಜತೆಗೆ ಮಠಾಧೀಶರನ್ನು ಕರೆದುಕೊಂಡು ಹೋಗಿ ಭೂಮಿ ಪೂಜೆ ಮಾಡಿಸಿದ್ದು ತಪ್ಪಾಗಿದೆ ಎಂದು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.