ಗ್ರಾಮದ ದಲಿತ ಮುಖಂಡ ಬಿ.ಬಿ. ಲಿಂಗರಾಜು ನೇತೃತ್ವದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಗ್ರಾಮಸ್ಥರು, ‘ಕೋಳೂರು ಗ್ರಾಮದ ಬಡವನದಿಣ್ಣೆಯ ಸರ್ವೆ ನಂ 173 ರಲ್ಲಿ ದಲಿತರ ಸ್ಮಶಾನಕ್ಕೆ ಮೀಸಲಿದ್ದ ಭೂಮಿಯನ್ನು, ಗ್ರಾಮದ ಆನಂದ್ ಎಂಬವರು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ, ತಹಶೀಲ್ದಾರರು ಮೀನಾಮೇಷ ಎಣಿಸುತ್ತಿದ್ದಾರೆ. ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಸಮಸ್ಯೆಯನ್ನು ಬಗೆಹರಿಸದಿದ್ದರೆ, 5ರಂದು ಮುಖ್ಯಮಂತ್ರಿಗಳಿಗೆ ಗ್ರಾಮದ ದಲಿತರೆಲ್ಲರೂ ತೆರಳಿ, ಮನವಿ ಸಲ್ಲಿಸಲಾಗುವುದು' ಎಂದರು.