ನಗರದಲ್ಲಿ ಗುರುವಾರ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿಭಟನೆ ಮಾಡುವವರ ಬಗ್ಗೆ ಸರ್ಕಾರಕ್ಕೆ ವಿಪರೀತ ತಾತ್ಸಾರ. ಹಾಗಾಗಿಯೇ, ನೀವು ಪ್ರತಿಭಟನೆ ಮಾಡುತ್ತೀರಾ ಮಾಡಿ, ಧರಣಿ ಕುಳಿತುಕೊಳ್ಳುತ್ತೀರಾ ಕುಳಿತುಕೊಳ್ಳಿ ಎನ್ನುತ್ತದೆ. ದೇಶದ ಎಲ್ಲರೂ ಚುನಾವಣೆ ಸಂದರ್ಭದಲ್ಲಿ ಒಗ್ಗಟ್ಟಾಗುವ ಮೂಲಕ ಅಂತಹ ಉದಾಸೀನ ಸರ್ಕಾರಗಳನ್ನು ಬದಲಿಸಬೇಕು’ ಎಂದು ಕರೆ ನೀಡಿದರು.