ಕಳೆದ ಲೋಕಸಭಾ ಚುನಾವಣೆಯಲ್ಲಿ ಭಂಡಾರಾ ಗೋಂದಿಯಾ ಲೋಕಸಭಾ ಕ್ಷೇತ್ರದಲ್ಲಿ ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದ ಪಟೋಲೆ ಬುಧವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರು ಕಾಂಗ್ರೆಸ್ ತ್ಯಜಿಸಿದ್ದರು.