<p><strong>ನವದೆಹಲಿ: </strong>ಭೀಮಾ– ಕೋರೆಗಾಂವ್ ಹಿಂಸಾಚಾರ ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಗುರುವಾರ ರಾಜ್ಯಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದವು. ಹಿಂಸಾಚಾರ ಭುಗಿಲೇಳಲು ಹಿಂದೂ ಸಂಘಟನೆಗಳೇ ಕಾರಣ ಎಂದು ಅವು ಆರೋಪಿಸಿದವು.</p>.<p>ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಲವು ವಿರೋಧ ಪಕ್ಷಗಳು ಆಗ್ರಹಿಸಿದವು.</p>.<p>ಈ ಬೇಡಿಕೆ ತಳ್ಳಿ ಹಾಕಿದ ಬಿಜೆಪಿ ಮತ್ತು ಶಿವ ಸೇನಾ ಸದಸ್ಯರು, ‘ಮಹಾರಾಷ್ಟ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಪೇಶ್ವೆಗಳ ವಿರುದ್ಧ ದಲಿತರು ಸಾಧಿಸಿದ ಜಯದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.</p>.<p><strong>ಗದ್ದಲ: </strong>ಮಹಾರಾಷ್ಟ್ರದಲ್ಲಿ ಬುಧವಾರ ಸಂಭವಿಸಿದ ಹಿಂಸಾಚಾರ ಗುರುವಾರ ಮೇಲ್ಮನೆಯಲ್ಲಿ ಹಲವು ಬಾರಿ ಗದ್ದಲ ಸೃಷ್ಟಿಸಿತು. ಅಂತಿಮವಾಗಿ ಶೂನ್ಯ ವೇಳೆಯಲ್ಲಿ ಈ ವಿಚಾರ ಚರ್ಚಿಸುವುದಕ್ಕೆ ಎಲ್ಲ ಪಕ್ಷಗಳು ಒಪ್ಪಿಕೊಂಡವು.</p>.<p>‘ದಲಿತರ ವಿರುದ್ಧ ಹಿಂಸಾಚಾರ ಹುಟ್ಟುಹಾಕಿದ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕಾಂಗ್ರೆಸ್ನ ರಜನಿ ಪಾಟೀಲ್ ಒತ್ತಾಯಿಸಿದರು.</p>.<p>ಎನ್ಸಿಪಿಯ ಶರದ್ ಪವಾರ್ ಮಾತನಾಡಿ, ಹಿಂಸಾಚಾರದ ಹಿಂದೆ ಕೆಲವು ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದರು.</p>.<p>’ಕಳೆದ 50 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಇರಬೇಕಿತ್ತು’ ಎಂದು ಪವಾರ್ ಹೇಳಿದರು.</p>.<p>ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಡಿಎಂಕೆಯ ಕನಿಮೊಳಿ, ‘ದಲಿತರು, ಮಹಿಳೆಯರು ಮತ್ತು ಶೋಷಿತರು ಭಯದಲ್ಲಿ ಜೀವಿಸುವಂತೆ ಮಾಡಲಾಗುತ್ತಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.</p>.<p>ಹಿಂಸಾಚಾರ ಖಂಡಿಸಿದ ಸಿಪಿಐನ ಡಿ. ರಾಜಾ, ‘ದಲಿತರ ಅಸ್ಮಿತೆಯನ್ನು ಸರಿಯಾದ ದೃಷ್ಟಿಕೋನದಲ್ಲಿ ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ವಿರೋಧ ಪಕ್ಷಗಳ ಸದಸ್ಯರ ಮಾತಿಗೆ ತಿರುಗೇಟು ನೀಡಿದ ಶಿವ ಸೇನಾದ ಸಂಜಯ್ ರಾವತ್, ‘ಭೀಮಾ–ಕೋರೆಂಗಾವ್ ಯುದ್ಧದ ಇತಿಹಾಸ ಗೊತ್ತಿಲ್ಲದವರು ಹೆಚ್ಚು ಮಾತನಾಡುತ್ತಿದ್ದಾರೆ. ಪೇಶ್ವೆಗಳು ಆರ್ಎಸ್ಎಸ್ ಅಥವಾ ಯಾವುದೇ ಹಿಂದೂ ಸಂಘಟನೆಗೆ ಸಂಬಂಧಿಸಿದವರಲ್ಲ. ಜನರನ್ನು ಒಡೆದು ಆಳುವುದಕ್ಕಾಗಿ ಕೆಲವು ಕಾಣದ ಕೈಗಳು ಈ ಕೆಲಸ ಮಾಡುತ್ತಿವೆ’ ಎಂದು ಹೇಳಿದರು.</p>.<p>ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಮತ್ತು ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರು ಭಾಷಣದ ಮೂಲಕ ಹಿಂಸಾಚಾರದ ಕಿಡಿ ಹೊತ್ತಿಸಿದ್ದರು ಎಂದು ಬಿಜೆಪಿ ಸದಸ್ಯ ಅಮರ್ ಸಾಬ್ಲೆ ಆರೋಪಿಸಿದರು.</p>.<p>‘ಇದನ್ನು ರಾಜಕೀಯ ವಿಚಾರವಾಗಿ ಯಾರೂ ಪರಿಗಣಿಸಬಾರದು. ಬಿಜೆಪಿ ಅಥವಾ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದಲಿತರನ್ನು ಗುರಿಯಾಗಿಸಲಾಗುತ್ತದೆ’ ಎಂದು ಕೇಂದ್ರ ಸಚಿವ ರಾಮ್ದಾಸ್ ಆಠವಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭೀಮಾ– ಕೋರೆಗಾಂವ್ ಹಿಂಸಾಚಾರ ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಗುರುವಾರ ರಾಜ್ಯಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದವು. ಹಿಂಸಾಚಾರ ಭುಗಿಲೇಳಲು ಹಿಂದೂ ಸಂಘಟನೆಗಳೇ ಕಾರಣ ಎಂದು ಅವು ಆರೋಪಿಸಿದವು.</p>.<p>ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿಯ ನೇತೃತ್ವದಲ್ಲಿ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಲವು ವಿರೋಧ ಪಕ್ಷಗಳು ಆಗ್ರಹಿಸಿದವು.</p>.<p>ಈ ಬೇಡಿಕೆ ತಳ್ಳಿ ಹಾಕಿದ ಬಿಜೆಪಿ ಮತ್ತು ಶಿವ ಸೇನಾ ಸದಸ್ಯರು, ‘ಮಹಾರಾಷ್ಟ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಪೇಶ್ವೆಗಳ ವಿರುದ್ಧ ದಲಿತರು ಸಾಧಿಸಿದ ಜಯದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.</p>.<p><strong>ಗದ್ದಲ: </strong>ಮಹಾರಾಷ್ಟ್ರದಲ್ಲಿ ಬುಧವಾರ ಸಂಭವಿಸಿದ ಹಿಂಸಾಚಾರ ಗುರುವಾರ ಮೇಲ್ಮನೆಯಲ್ಲಿ ಹಲವು ಬಾರಿ ಗದ್ದಲ ಸೃಷ್ಟಿಸಿತು. ಅಂತಿಮವಾಗಿ ಶೂನ್ಯ ವೇಳೆಯಲ್ಲಿ ಈ ವಿಚಾರ ಚರ್ಚಿಸುವುದಕ್ಕೆ ಎಲ್ಲ ಪಕ್ಷಗಳು ಒಪ್ಪಿಕೊಂಡವು.</p>.<p>‘ದಲಿತರ ವಿರುದ್ಧ ಹಿಂಸಾಚಾರ ಹುಟ್ಟುಹಾಕಿದ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕಾಂಗ್ರೆಸ್ನ ರಜನಿ ಪಾಟೀಲ್ ಒತ್ತಾಯಿಸಿದರು.</p>.<p>ಎನ್ಸಿಪಿಯ ಶರದ್ ಪವಾರ್ ಮಾತನಾಡಿ, ಹಿಂಸಾಚಾರದ ಹಿಂದೆ ಕೆಲವು ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದರು.</p>.<p>’ಕಳೆದ 50 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಇರಬೇಕಿತ್ತು’ ಎಂದು ಪವಾರ್ ಹೇಳಿದರು.</p>.<p>ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಡಿಎಂಕೆಯ ಕನಿಮೊಳಿ, ‘ದಲಿತರು, ಮಹಿಳೆಯರು ಮತ್ತು ಶೋಷಿತರು ಭಯದಲ್ಲಿ ಜೀವಿಸುವಂತೆ ಮಾಡಲಾಗುತ್ತಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.</p>.<p>ಹಿಂಸಾಚಾರ ಖಂಡಿಸಿದ ಸಿಪಿಐನ ಡಿ. ರಾಜಾ, ‘ದಲಿತರ ಅಸ್ಮಿತೆಯನ್ನು ಸರಿಯಾದ ದೃಷ್ಟಿಕೋನದಲ್ಲಿ ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ವಿರೋಧ ಪಕ್ಷಗಳ ಸದಸ್ಯರ ಮಾತಿಗೆ ತಿರುಗೇಟು ನೀಡಿದ ಶಿವ ಸೇನಾದ ಸಂಜಯ್ ರಾವತ್, ‘ಭೀಮಾ–ಕೋರೆಂಗಾವ್ ಯುದ್ಧದ ಇತಿಹಾಸ ಗೊತ್ತಿಲ್ಲದವರು ಹೆಚ್ಚು ಮಾತನಾಡುತ್ತಿದ್ದಾರೆ. ಪೇಶ್ವೆಗಳು ಆರ್ಎಸ್ಎಸ್ ಅಥವಾ ಯಾವುದೇ ಹಿಂದೂ ಸಂಘಟನೆಗೆ ಸಂಬಂಧಿಸಿದವರಲ್ಲ. ಜನರನ್ನು ಒಡೆದು ಆಳುವುದಕ್ಕಾಗಿ ಕೆಲವು ಕಾಣದ ಕೈಗಳು ಈ ಕೆಲಸ ಮಾಡುತ್ತಿವೆ’ ಎಂದು ಹೇಳಿದರು.</p>.<p>ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಮತ್ತು ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರು ಭಾಷಣದ ಮೂಲಕ ಹಿಂಸಾಚಾರದ ಕಿಡಿ ಹೊತ್ತಿಸಿದ್ದರು ಎಂದು ಬಿಜೆಪಿ ಸದಸ್ಯ ಅಮರ್ ಸಾಬ್ಲೆ ಆರೋಪಿಸಿದರು.</p>.<p>‘ಇದನ್ನು ರಾಜಕೀಯ ವಿಚಾರವಾಗಿ ಯಾರೂ ಪರಿಗಣಿಸಬಾರದು. ಬಿಜೆಪಿ ಅಥವಾ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದಲಿತರನ್ನು ಗುರಿಯಾಗಿಸಲಾಗುತ್ತದೆ’ ಎಂದು ಕೇಂದ್ರ ಸಚಿವ ರಾಮ್ದಾಸ್ ಆಠವಲೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>