<p><strong>ಬೆಂಗಳೂರು: </strong>ಫೆಬ್ರುವರಿಯೊಳಗೆ ಇಡೀ ನಗರ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್ ಮುಕ್ತವಾಗಲಿದೆ ಎಂದು ಮೇಯರ್ ಆರ್.ಸಂಪತ್ರಾಜ್ ತಿಳಿಸಿದ್ದಾರೆ.</p>.<p>‘ಕೃಷಿ ಸಚಿವ ಕೃಷ್ಣಬೈರೇಗೌಡ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ತಮ್ಮ ಕ್ಷೇತ್ರಗಳಲ್ಲಿ ಖುದ್ದು ನಿಂತು ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೆ. ಪಾಲಿಕೆ ಸದಸ್ಯರು, ಶಾಸಕರು, ಸಂಸದರು ಹಾಗೂ ಸಚಿವರಿಗೆ ಫ್ಲೆಕ್ಸ್ ಹಾಕಿಸಿಕೊಳ್ಳುವ ಆಸಕ್ತಿ ಇಲ್ಲ. ಆದರೆ, ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಈ ಖಯಾಲಿ ಇದೆ. ಈ ಸಮಸ್ಯೆಗೆ ಮುಕ್ತಿ ಕಾಣಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಗಡುವು ವಿಸ್ತರಣೆ: </strong>ಅನಧಿಕೃತ ಜಾಹೀರಾತು ಫಲಕ ತೆರವಿಗೆ ನೀಡಿದ್ದ ಗಡುವು ವಿಸ್ತರಿಸಲಾಗಿದೆ. ಜನವರಿ 6ರೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಆಯುಕ್ತರಿಗೆ ಸೂಚನೆ ಕೊಡಲಾಗಿದೆ. ಒಂದು ವೇಳೆ ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದವರ ತಲೆದಂಡವೂ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡುವುದು ಮತ್ತು ನಿಗಾ ವಹಿಸುವ ಅಧಿಕಾರವನ್ನು ಕೇಂದ್ರ ಕಚೇರಿಯಲ್ಲಿನ ಜಾಹೀರಾತು ವಿಭಾಗಕ್ಕೆ ನೀಡಲು ನಿರ್ಧರಿಸಲಾಗಿದೆ. ಜನವರಿ 6ರಂದು ಮತ್ತೊಮ್ಮೆ ಸಭೆ ಕರೆದು, ತೀರ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವು ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೇಯರ್ ಅವರು ಪಾಲಿಕೆ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಈ ಆದೇಶ ನೀಡಿ ವಾರ ಕಳೆದರೂ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾವಳಿ ನಿಯಂತ್ರಣಕ್ಕೆ ಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಫೆಬ್ರುವರಿಯೊಳಗೆ ಇಡೀ ನಗರ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್ ಮುಕ್ತವಾಗಲಿದೆ ಎಂದು ಮೇಯರ್ ಆರ್.ಸಂಪತ್ರಾಜ್ ತಿಳಿಸಿದ್ದಾರೆ.</p>.<p>‘ಕೃಷಿ ಸಚಿವ ಕೃಷ್ಣಬೈರೇಗೌಡ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರು ತಮ್ಮ ಕ್ಷೇತ್ರಗಳಲ್ಲಿ ಖುದ್ದು ನಿಂತು ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೆ. ಪಾಲಿಕೆ ಸದಸ್ಯರು, ಶಾಸಕರು, ಸಂಸದರು ಹಾಗೂ ಸಚಿವರಿಗೆ ಫ್ಲೆಕ್ಸ್ ಹಾಕಿಸಿಕೊಳ್ಳುವ ಆಸಕ್ತಿ ಇಲ್ಲ. ಆದರೆ, ಬೆಂಬಲಿಗರು ಮತ್ತು ಅಭಿಮಾನಿಗಳಿಗೆ ಈ ಖಯಾಲಿ ಇದೆ. ಈ ಸಮಸ್ಯೆಗೆ ಮುಕ್ತಿ ಕಾಣಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಗಡುವು ವಿಸ್ತರಣೆ: </strong>ಅನಧಿಕೃತ ಜಾಹೀರಾತು ಫಲಕ ತೆರವಿಗೆ ನೀಡಿದ್ದ ಗಡುವು ವಿಸ್ತರಿಸಲಾಗಿದೆ. ಜನವರಿ 6ರೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಆಯುಕ್ತರಿಗೆ ಸೂಚನೆ ಕೊಡಲಾಗಿದೆ. ಒಂದು ವೇಳೆ ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದವರ ತಲೆದಂಡವೂ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಜಾಹೀರಾತು ಫಲಕಗಳ ಅಳವಡಿಕೆಗೆ ಅನುಮತಿ ನೀಡುವುದು ಮತ್ತು ನಿಗಾ ವಹಿಸುವ ಅಧಿಕಾರವನ್ನು ಕೇಂದ್ರ ಕಚೇರಿಯಲ್ಲಿನ ಜಾಹೀರಾತು ವಿಭಾಗಕ್ಕೆ ನೀಡಲು ನಿರ್ಧರಿಸಲಾಗಿದೆ. ಜನವರಿ 6ರಂದು ಮತ್ತೊಮ್ಮೆ ಸಭೆ ಕರೆದು, ತೀರ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.</p>.<p>ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವು ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೇಯರ್ ಅವರು ಪಾಲಿಕೆ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಈ ಆದೇಶ ನೀಡಿ ವಾರ ಕಳೆದರೂ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾವಳಿ ನಿಯಂತ್ರಣಕ್ಕೆ ಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>