<p><strong>ಬೆಂಗಳೂರು:</strong> ಕರ್ನಾಟಕ ಗಾಂಧಿ ಸ್ಮಾರಕ ನಿಧಿಯು ‘ಡಾ. ಹೊ.ಶ್ರೀನಿವಾಸಯ್ಯ ದತ್ತಿ ನಿಧಿ’ಯನ್ನು ಸ್ಥಾಪಿಸಿದ್ದು, ₹ 2 ಲಕ್ಷವನ್ನು ಠೇವಣಿ ಇಡಲಾಗಿದೆ.</p>.<p>ನಗರದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಅವರು ಇದಕ್ಕೆ ಚಾಲನೆ ನೀಡಿದರು.</p>.<p>‘ಗಾಂಧಿಮಾರ್ಗಿ ಹೊ.ಶ್ರೀ.’ ಸಂಸ್ಮರಣಾ ಕೃತಿಯನ್ನು ಬಿಡುಗಡೆ ಮಾಡಿದರು. ಹೊ.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಎಚ್.ಕೆ.ಪಾಟೀಲ್, ‘ಶ್ರೀನಿವಾಸಯ್ಯ ಅವರು ಇಳಿ ವಯಸ್ಸಿನಲ್ಲೂ ತಮ್ಮ ನಡವಳಿಕೆಯಿಂದ ಸೊಕ್ಕಿನವರನ್ನು ವಿನಮ್ರರನ್ನಾಗಿಸುತ್ತಿದ್ದರು. ಬದುಕಿನಲ್ಲಿ ಯಶಸ್ವಿಯಾಗಲು ಹೇಗೆ ಜೀವಿಸಬೇಕು ಎಂಬುದಕ್ಕೆ ಅವರು ಉತ್ತಮ ನಿದರ್ಶನ. ಸಿನಿಮಾ ನಟ, ನಟಿಯರಿಗಿಂತ ಶ್ರೀನಿವಾಸಯ್ಯ ಅವರು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಗಾಂಧಿ ಸ್ಮಾರಕ ನಿಧಿಯು ‘ಡಾ. ಹೊ.ಶ್ರೀನಿವಾಸಯ್ಯ ದತ್ತಿ ನಿಧಿ’ಯನ್ನು ಸ್ಥಾಪಿಸಿದ್ದು, ₹ 2 ಲಕ್ಷವನ್ನು ಠೇವಣಿ ಇಡಲಾಗಿದೆ.</p>.<p>ನಗರದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಅವರು ಇದಕ್ಕೆ ಚಾಲನೆ ನೀಡಿದರು.</p>.<p>‘ಗಾಂಧಿಮಾರ್ಗಿ ಹೊ.ಶ್ರೀ.’ ಸಂಸ್ಮರಣಾ ಕೃತಿಯನ್ನು ಬಿಡುಗಡೆ ಮಾಡಿದರು. ಹೊ.ಶ್ರೀನಿವಾಸಯ್ಯ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಎಚ್.ಕೆ.ಪಾಟೀಲ್, ‘ಶ್ರೀನಿವಾಸಯ್ಯ ಅವರು ಇಳಿ ವಯಸ್ಸಿನಲ್ಲೂ ತಮ್ಮ ನಡವಳಿಕೆಯಿಂದ ಸೊಕ್ಕಿನವರನ್ನು ವಿನಮ್ರರನ್ನಾಗಿಸುತ್ತಿದ್ದರು. ಬದುಕಿನಲ್ಲಿ ಯಶಸ್ವಿಯಾಗಲು ಹೇಗೆ ಜೀವಿಸಬೇಕು ಎಂಬುದಕ್ಕೆ ಅವರು ಉತ್ತಮ ನಿದರ್ಶನ. ಸಿನಿಮಾ ನಟ, ನಟಿಯರಿಗಿಂತ ಶ್ರೀನಿವಾಸಯ್ಯ ಅವರು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>