‘ಕೆ–ಶಿಪ್ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಆನವಟ್ಟಿ ಹೃದಯ ಭಾಗದಲ್ಲಿ ಕಾಮಗಾರಿ ಪ್ರಾರಂಭವಾಗಿ ಎರಡು ತಿಂಗಳಾದರೂ ಮುಗಿದಿಲ್ಲ. ವಾಹನ ಚಾಲಕರು ರಸ್ತೆಯಲ್ಲಿ ಸಂಚರಿಸುವಾಗ ಹರಸಾಹಸ ಪಡಬೇಕಾಗಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಪಿ. ಹನುಮಂತಪ್ಪ ಆಗ್ರಹಿಸಿದರು.