ಮಾಜಿ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಎಲ್ಲ ಧರ್ಮಗಳ ಜನರಿಗೂ ರಕ್ಷಣೆ ಇತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಹಿಂದೂ ಮತ್ತು ಮುಸ್ಲಿಮರ ಕೊಲೆಗಳು ಹೆಚ್ಚಾಗಿವೆ. ಆಡಳಿತ ವೈಫಲ್ಯವೇ ಇದಕ್ಕೆ ಕಾರಣ ಎಂದು ದೂರಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಸುಪ್ರಸಾದ ಶೆಟ್ಟಿ ಇದ್ದರು.