<p><strong>ಕಾರವಾರ: </strong>‘ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭೇಟಿಗೆ ಮೂರು ತಿಂಗಳಿಂದ ಪ್ರಯತ್ನ ನಡೆಸುತ್ತಿದ್ದರೂ ಸಾಧ್ಯವಾಗಿಲ್ಲ. ಭೇಟಿಗೆ ಅವರೂ ಅವಕಾಶವೂ ಕೊಟ್ಟಿಲ್ಲ’ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಗುರುವಾರ ಇಲ್ಲಿ ಹೇಳಿದರು.</p>.<p>‘ನಾನು ಬಿಜೆಪಿ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಸ್ಪರ್ಧಿಸುವ ಕುರಿತು ವಿವರಿಸಿದ್ದೆ. ಅದಕ್ಕೆ ಅವರು ಸ್ಥಳೀಯ ನಾಯಕರನ್ನು ಒಪ್ಪಿಸಿ ಎನ್ನುವ ಸಲಹೆ ನೀಡಿದ್ದರು. ಆ ಪ್ರಕಾರ ಹೆಗಡೆ ಅವರನ್ನು ಭೇಟಿ ಮಾಡಲು ಮೂರು ತಿಂಗಳಿಂದ ಪ್ರಯತ್ನ ನಡೆಸುತ್ತಿದ್ದೇನೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ನಾನು ಯಾರ ಕಾಲು ಹಿಡಿದು ರಾಜಕೀಯ ಮಾಡಿದವನಲ್ಲ. ನಮ್ಮ ಕುಟುಂಬ ಸ್ವಾಭಿಮಾನ ಬಿಟ್ಟು ರಾಜಕಾರಣ ಮಾಡಿಲ್ಲ’ ಎಂದು ಪರೋಕ್ಷವಾಗಿ ಹೆಗಡೆ ವಿರುದ್ಧ ಅಸ್ನೋಟಿಕರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಂದಿನ ಹತ್ತು ದಿನಗಳಲ್ಲಿ ಯಾವ ಪಕ್ಷಕ್ಕೆ ಸೇರುತ್ತೇನೆ ಎಂಬುದನ್ನು ಪ್ರಕಟಿಸುತ್ತೇನೆ. ಅದಕ್ಕೂ ಮೊದಲು ಎಲ್ಲ ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿ ಮಾಡಲು ಶುಕ್ರವಾರ ಬೆಂಗಳೂರಿಗೆ ತೆರಳುತ್ತೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>‘ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭೇಟಿಗೆ ಮೂರು ತಿಂಗಳಿಂದ ಪ್ರಯತ್ನ ನಡೆಸುತ್ತಿದ್ದರೂ ಸಾಧ್ಯವಾಗಿಲ್ಲ. ಭೇಟಿಗೆ ಅವರೂ ಅವಕಾಶವೂ ಕೊಟ್ಟಿಲ್ಲ’ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಗುರುವಾರ ಇಲ್ಲಿ ಹೇಳಿದರು.</p>.<p>‘ನಾನು ಬಿಜೆಪಿ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಸ್ಪರ್ಧಿಸುವ ಕುರಿತು ವಿವರಿಸಿದ್ದೆ. ಅದಕ್ಕೆ ಅವರು ಸ್ಥಳೀಯ ನಾಯಕರನ್ನು ಒಪ್ಪಿಸಿ ಎನ್ನುವ ಸಲಹೆ ನೀಡಿದ್ದರು. ಆ ಪ್ರಕಾರ ಹೆಗಡೆ ಅವರನ್ನು ಭೇಟಿ ಮಾಡಲು ಮೂರು ತಿಂಗಳಿಂದ ಪ್ರಯತ್ನ ನಡೆಸುತ್ತಿದ್ದೇನೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ನಾನು ಯಾರ ಕಾಲು ಹಿಡಿದು ರಾಜಕೀಯ ಮಾಡಿದವನಲ್ಲ. ನಮ್ಮ ಕುಟುಂಬ ಸ್ವಾಭಿಮಾನ ಬಿಟ್ಟು ರಾಜಕಾರಣ ಮಾಡಿಲ್ಲ’ ಎಂದು ಪರೋಕ್ಷವಾಗಿ ಹೆಗಡೆ ವಿರುದ್ಧ ಅಸ್ನೋಟಿಕರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮುಂದಿನ ಹತ್ತು ದಿನಗಳಲ್ಲಿ ಯಾವ ಪಕ್ಷಕ್ಕೆ ಸೇರುತ್ತೇನೆ ಎಂಬುದನ್ನು ಪ್ರಕಟಿಸುತ್ತೇನೆ. ಅದಕ್ಕೂ ಮೊದಲು ಎಲ್ಲ ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿ ಮಾಡಲು ಶುಕ್ರವಾರ ಬೆಂಗಳೂರಿಗೆ ತೆರಳುತ್ತೇನೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>