<p><strong>ಶನಿವಾರಸಂತೆ:</strong> ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಬೇಕು ಎಂದು ಅಧ್ಯಕ್ಷ ಮಹಮ್ಮದ್ ಗೌಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ನೆಲ ಬಾಡಿಗೆ ಆಧಾರದ ಮೇಲೆ ಗುತ್ತಿಗೆದಾರ ಎಸ್.ಎನ್.ರಘು ಅವರು ವ್ಯಕ್ತಿಯೊಬ್ಬರಿಗೆ ನೀಡಿದ್ದರು. 2012ಕ್ಕೆ ಅವಧಿ ಮುಗಿದಿದ್ದರೂ ಗುತ್ತಿಗೆದಾರ ಆ ಕಟ್ಟಡವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿರಲಿಲ್ಲ. ಈ ವಿವಾದ ಕೋರ್ಟ್ ಮೆಟ್ಟಿಲೇರಿ ಗುತ್ತಿಗೆದಾರರ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದರೆ, ಹಿಂದಿದ್ದ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ.</p>.<p>ಇದರಿಂದ ಬೇಸತ್ತ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ‘ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಹಸ್ತಾಂತರಿಸದೆ ಇರುವುದರಿಂದ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮೂಲಕ ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ, ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶೀಘ್ರ ಪಂಚಾಯಿತಿಗೆ ವರ್ಗಾಯಿಸುವ ಭರವಸೆ ನೀಡಿದ್ದಾರೆ ಎಂದು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಉಪಾಧ್ಯಕ್ಷೆ ಗೀತಾ ಹರೀಶ್, ಸದಸ್ಯರಾದ ಆದಿತ್ಯಗೌಡ, ಸರ್ದಾರ್ ಅಹಮ್ಮದ್, ಸೌಭಾಗ್ಯಲಕ್ಷ್ಮಿ, ರಜನಿ, ಉಷಾ, ಹೇಮಾವತಿ ಇದ್ದರು. ಪಂಚಾಯಿತಿಯ ಇನ್ನಿಬ್ಬರು ಸದಸ್ಯರಾದ ಎಚ್.ಆರ್.ಹರೀಶ್ ಕುಮಾರ್ ಹಾಗೂ ಎಸ್.ಎನ್.ಪಾಂಡು ನಿಯೋಗದಲ್ಲಿ ಗೈರುಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಇರುವ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಬೇಕು ಎಂದು ಅಧ್ಯಕ್ಷ ಮಹಮ್ಮದ್ ಗೌಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ನೆಲ ಬಾಡಿಗೆ ಆಧಾರದ ಮೇಲೆ ಗುತ್ತಿಗೆದಾರ ಎಸ್.ಎನ್.ರಘು ಅವರು ವ್ಯಕ್ತಿಯೊಬ್ಬರಿಗೆ ನೀಡಿದ್ದರು. 2012ಕ್ಕೆ ಅವಧಿ ಮುಗಿದಿದ್ದರೂ ಗುತ್ತಿಗೆದಾರ ಆ ಕಟ್ಟಡವನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿರಲಿಲ್ಲ. ಈ ವಿವಾದ ಕೋರ್ಟ್ ಮೆಟ್ಟಿಲೇರಿ ಗುತ್ತಿಗೆದಾರರ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದರೆ, ಹಿಂದಿದ್ದ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ.</p>.<p>ಇದರಿಂದ ಬೇಸತ್ತ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ‘ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಹಸ್ತಾಂತರಿಸದೆ ಇರುವುದರಿಂದ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮೂಲಕ ಆಗ್ರಹಿಸಿದರು.</p>.<p>ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ, ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶೀಘ್ರ ಪಂಚಾಯಿತಿಗೆ ವರ್ಗಾಯಿಸುವ ಭರವಸೆ ನೀಡಿದ್ದಾರೆ ಎಂದು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಗೌಸ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಉಪಾಧ್ಯಕ್ಷೆ ಗೀತಾ ಹರೀಶ್, ಸದಸ್ಯರಾದ ಆದಿತ್ಯಗೌಡ, ಸರ್ದಾರ್ ಅಹಮ್ಮದ್, ಸೌಭಾಗ್ಯಲಕ್ಷ್ಮಿ, ರಜನಿ, ಉಷಾ, ಹೇಮಾವತಿ ಇದ್ದರು. ಪಂಚಾಯಿತಿಯ ಇನ್ನಿಬ್ಬರು ಸದಸ್ಯರಾದ ಎಚ್.ಆರ್.ಹರೀಶ್ ಕುಮಾರ್ ಹಾಗೂ ಎಸ್.ಎನ್.ಪಾಂಡು ನಿಯೋಗದಲ್ಲಿ ಗೈರುಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>