ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತ ಬಂದ್ಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ), ಬುದ್ಧ ವಿಹಾರ ನಿರ್ಮಾಣ ಸಮಿತಿ, ಸಮತಾ ಸೈನಿಕ ದಳ, ಕರ್ನಾಟಕ ವಾಲ್ಮೀಕಿ ಸಂಘರ್ಷ ಸಮಿತಿ, ಕರ್ನಾಟಕ ಪ್ರದೇಶ ಮಾದಿಗ ಸಂಘಟನೆ ಹಾಗೂ ಚಲವಾದಿ ಸೇವಾ ಸಮಿತಿ ಭಾಗವಹಿಸಲಿವೆ ಎಂದರು.