<p><strong>ಸಂತೇಮರಹಳ್ಳಿ: </strong>ಸಮೀಪದ ಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಬಸವ ವಸತಿ ಯೋಜನೆ ಆಶ್ರಯ ಫಲಾನುಭವಿಗಳ ಆಯ್ಕೆ ಸಂಬಂಧ ಈಚೆಗೆ ಗ್ರಾಮಸಭೆ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ಮಾತನಾಡಿ, 2017–18ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ 54 ಮನೆಗಳು ಮಂಜೂರಾಗಿದ್ದು, ಫಲಾನುಭವಿಗಳ ಆಯ್ಕೆ ಸಂಬಂಧ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊಸೂರು, ಹುಲ್ಲೇಪುರ, ಮಹಾಂತಳಪುರ, ಕರಡಿಮೋಳೆ, ಯಡಿಯೂರು ಹಾಗೂ ಮಂಗಲ ಸೇರಿದಂತೆ 6 ಗ್ರಾಮಗಳ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದರು.</p>.<p>ಸೌಲಭ್ಯದಿಂದ ವಂಚಿತವಾಗಿರುವ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಫಲಾನುಭವಿಗಳು ನಿವೇಶನ ದಾಖಲಾತಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರವನ್ನು ಕಚೇರಿಗೆ ನೀಡಬೇಕು ಎಂದು ಮಾಹಿತಿ ನೀಡಿದರು.</p>.<p>ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸರ್ಕಾರದಿಂದ ದೊರಕುವ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಆಯ್ಕೆಯಾಗುವ ಫಲಾನುಭವಿಗಳು 3 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. 4 ಹಂತದಲ್ಲಿ ಹಣ ಪಾವತಿಸಲಾಗುತ್ತದೆ. ಫಲಾನುಭವಿಗಳು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಕೊಳ್ಳಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಬಲತಾ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸಾಕಮ್ಮ, ಉಪಾಧ್ಯಕ್ಷೆ ಸುಮಾ, ಸದಸ್ಯರಾದ ಶಿವಣ್ಣ, ಅನ್ನಪ್ಪಸ್ವಾಮಿ, ನಾಗಲಕ್ಷ್ಮೀ, ಕಮಲಮ್ಮ, ದೊರೆಸ್ವಾಮಿ, ಮಹೇಶ್, ಆನಂದಮೂರ್ತಿ, ಶಂಕರ್, ನಾಗರಾಜು, ಸುಂದರ್, ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ: </strong>ಸಮೀಪದ ಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಬಸವ ವಸತಿ ಯೋಜನೆ ಆಶ್ರಯ ಫಲಾನುಭವಿಗಳ ಆಯ್ಕೆ ಸಂಬಂಧ ಈಚೆಗೆ ಗ್ರಾಮಸಭೆ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ಮಾತನಾಡಿ, 2017–18ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ 54 ಮನೆಗಳು ಮಂಜೂರಾಗಿದ್ದು, ಫಲಾನುಭವಿಗಳ ಆಯ್ಕೆ ಸಂಬಂಧ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊಸೂರು, ಹುಲ್ಲೇಪುರ, ಮಹಾಂತಳಪುರ, ಕರಡಿಮೋಳೆ, ಯಡಿಯೂರು ಹಾಗೂ ಮಂಗಲ ಸೇರಿದಂತೆ 6 ಗ್ರಾಮಗಳ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದರು.</p>.<p>ಸೌಲಭ್ಯದಿಂದ ವಂಚಿತವಾಗಿರುವ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಫಲಾನುಭವಿಗಳು ನಿವೇಶನ ದಾಖಲಾತಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರವನ್ನು ಕಚೇರಿಗೆ ನೀಡಬೇಕು ಎಂದು ಮಾಹಿತಿ ನೀಡಿದರು.</p>.<p>ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸರ್ಕಾರದಿಂದ ದೊರಕುವ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಆಯ್ಕೆಯಾಗುವ ಫಲಾನುಭವಿಗಳು 3 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. 4 ಹಂತದಲ್ಲಿ ಹಣ ಪಾವತಿಸಲಾಗುತ್ತದೆ. ಫಲಾನುಭವಿಗಳು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಕೊಳ್ಳಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಬಲತಾ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸಾಕಮ್ಮ, ಉಪಾಧ್ಯಕ್ಷೆ ಸುಮಾ, ಸದಸ್ಯರಾದ ಶಿವಣ್ಣ, ಅನ್ನಪ್ಪಸ್ವಾಮಿ, ನಾಗಲಕ್ಷ್ಮೀ, ಕಮಲಮ್ಮ, ದೊರೆಸ್ವಾಮಿ, ಮಹೇಶ್, ಆನಂದಮೂರ್ತಿ, ಶಂಕರ್, ನಾಗರಾಜು, ಸುಂದರ್, ನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>