<p><strong>ಮಂಗಳೂರು:</strong> ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ದೀಪಕ್ ರಾವ್ ಅವರ ಕಾಟಿಪಳ್ಳದ ನಿವಾಸಕ್ಕೆ ಶುಕ್ರವಾರ ಸಾಂತ್ವನ ಹೇಳಲು ಬಂದಿದ್ದ ಸ್ಥಳೀಯ ಶಾಸಕ ಮೊಯಿದ್ದೀನ್ ಬಾವಾ ಅವರನ್ನು, ದೀಪಕ್ ಕುಟುಂಬದವರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಬೆಂಬಲಿಗರೊಂದಿಗೆ ಮನೆಗೆ ಬಂದ ಬಾವಾ ಅವರು ನೀಡಿದ ಪರಿಹಾರ ಹಣವನ್ನು ಸ್ವೀಕರಿಸಲು ನಿರಾಕರಿಸಿದ ದೀಪಕ್ ರಾವ್ ಕುಟುಂಬಸ್ಥರು 'ನಿನ್ನೆ ಬರಬೇಕಿತ್ತು ಅಂತ್ಯಕ್ರಿಯೆಗೆ, ಇಂದು ಯಾಕೆ ಬಂದಿದ್ದೀರಿ' ಎಂದು ಪ್ರಶ್ನಿಸಿದರು.</p>.<p>'ನಿನ್ನೆ ಉದ್ವಿಗ್ನ ಸ್ಥಿತಿ ಇದ್ದುದರಿಂದ ಶಾಂತಿ ಭಂಗವಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಅಂತ್ಯಕ್ರಿಯೆಗೆ ಬರಬೇಡಿ ಎಂದಿದ್ದರು, ಹಾಗಾಗಿ ಬರಲಿಲ್ಲ, ನಾನು ಮನೆಯಲ್ಲೇ ದುಃಖತಪ್ತನಾಗಿ ಕುಳಿತಿದ್ದೆ' ಎಂದು ಬಾವಾ ಪ್ರತಿಕ್ರಿಯೆ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕುಟುಂಬದವರು, 'ನಿಮ್ಮ ಪರಿಹಾರವೂ ಬೇಡ. ಸಹಾಯವೂ ಬೇಡ' ಎಂದು ಹೇಳಿ, ಬಾವ ಅವರನ್ನು ವಾಪಸ್ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ದೀಪಕ್ ರಾವ್ ಅವರ ಕಾಟಿಪಳ್ಳದ ನಿವಾಸಕ್ಕೆ ಶುಕ್ರವಾರ ಸಾಂತ್ವನ ಹೇಳಲು ಬಂದಿದ್ದ ಸ್ಥಳೀಯ ಶಾಸಕ ಮೊಯಿದ್ದೀನ್ ಬಾವಾ ಅವರನ್ನು, ದೀಪಕ್ ಕುಟುಂಬದವರು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಬೆಂಬಲಿಗರೊಂದಿಗೆ ಮನೆಗೆ ಬಂದ ಬಾವಾ ಅವರು ನೀಡಿದ ಪರಿಹಾರ ಹಣವನ್ನು ಸ್ವೀಕರಿಸಲು ನಿರಾಕರಿಸಿದ ದೀಪಕ್ ರಾವ್ ಕುಟುಂಬಸ್ಥರು 'ನಿನ್ನೆ ಬರಬೇಕಿತ್ತು ಅಂತ್ಯಕ್ರಿಯೆಗೆ, ಇಂದು ಯಾಕೆ ಬಂದಿದ್ದೀರಿ' ಎಂದು ಪ್ರಶ್ನಿಸಿದರು.</p>.<p>'ನಿನ್ನೆ ಉದ್ವಿಗ್ನ ಸ್ಥಿತಿ ಇದ್ದುದರಿಂದ ಶಾಂತಿ ಭಂಗವಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಅಂತ್ಯಕ್ರಿಯೆಗೆ ಬರಬೇಡಿ ಎಂದಿದ್ದರು, ಹಾಗಾಗಿ ಬರಲಿಲ್ಲ, ನಾನು ಮನೆಯಲ್ಲೇ ದುಃಖತಪ್ತನಾಗಿ ಕುಳಿತಿದ್ದೆ' ಎಂದು ಬಾವಾ ಪ್ರತಿಕ್ರಿಯೆ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕುಟುಂಬದವರು, 'ನಿಮ್ಮ ಪರಿಹಾರವೂ ಬೇಡ. ಸಹಾಯವೂ ಬೇಡ' ಎಂದು ಹೇಳಿ, ಬಾವ ಅವರನ್ನು ವಾಪಸ್ ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>